
ಬೆಳಗಾವಿ: ತಾಲೂಕ ಆಡಳಿತ ಅಥಣಿ, ತಾಲೂಕ ಪಂಚಾಯತ್ ಅಥಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥಣಿ ಇವರ ಆಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ, ನೊಂದವರ ನಂದಾದೀಪ, ಹಾಗೂ ಸಾಧನೆಗಳ ಸರದಾರ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ದೇವರಾಜ ಅರಸುರವರ 110 ನೆಯ ಜನ್ಮ ದಿನಾಚರಣೆಯನ್ನು 20/08/2025 ರಂದು ಬೆಳಗ್ಗೆ ಅಥಣಿಯ ತಾಲೂಕ ಪಂಚಾಯತಿ ಸಭಾಭವನದಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮುಖಾಂತರ ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖಂಡರಾದ ಹಾಗೂ ಅಥಣಿ ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸಿದ್ಧಾರ್ಥ ಸಿಂಗೆ, ಅಥಣಿ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ, ಪುರಸಭೆಯ ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಯಂಕಚ್ಚಿ, ಅಥಣಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎಂ ಆರ್, ಮುಂಜೇ, ತಾಲೂಕ ಪಂಚಾಯತ್ ಆಡಳಿತ ಅಧಿಕಾರಿಗಳಾದ ಶ್ರೀ ಬಸವರಾಜ್ ಹೆಗ್ಗನಾಯಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ಕಲ್ಯಾಣ ಅಧಿಕಾರಿಗಳಾದ ಶ್ರೀ ವೆಂಕಟೇಶ ಕುಲಕರ್ಣಿ, ಇಲಾಖೆಯ ಅಧಿಕಾರಿಗಳು ಮತ್ತು ಮುದ್ದು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಗಣ್ಯ ವ್ಯಕ್ತಿಗಳು ಪಾಲ್ಗೊಂಡು ಈ ಕಾರ್ಯಕ್ರಮಕ್ಕೆ ಆಗಮಿಸಿ ಶೋಭೆ ತಂದರು.
ವರದಿ. ವಿಠ್ಠಲ ಖೋಕಾಟೆ ಅಥಣಿ



















