ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

ಬಳ್ಳಾರಿ / ಕಂಪ್ಲಿ : ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿತು.

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ:
ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು:
ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ:
ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು:
ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.
ಸಂದರ್ಭದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಸಮನ್ವಯ ಸಮಿತಿ ಸದಸ್ಯರಾದ ವಸಂತ್ ರಾಜ್ ಕಹಳೆ ಕಾರ್ಯಕರ್ತರಾದ ಇ.ಧನಂಜಯ, ಭೀಮಾ ಆರ್ಮಿಯ ಅಧ್ಯಕ್ಷ ಎ.ಎಸ್. ಯಲ್ಲಪ್ಪ, ಡಿಎಸ್ಎಸ್ ಮಾ ನಾಯಕ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಂಘರ್ಷ ಸಮಿತಿ ಕಂಪ್ಲಿ ಅಧ್ಯಕ್ಷ ಎಸ್, ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!