ಕಲಬುರಗಿ: ಕಳೆದ 5 ವರ್ಷಗಳಿಂದ ಯುವ ಸಬ ಲೀಕರಣಕ್ಕಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಮಾಜ ಸೇವಕಿ ಮಾಣಿಕಮ್ಮ ಜಮಾದಾರ ಅವರಿಗೆ ರಾಜ್ಯ ಯುವ ಪುರಸ್ಕಾರ ಪ್ರದಾನ ಮಾಡಲಾಯಿತು.
ಆಗಸ್ಟ್ 20 ರಂದು ಬೆಂಗಳೂರಿನ ಟೌನ್ ಹಾಲ್ನಲ್ಲಿ, ಕರ್ನಾಟಕ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಖಿಲ ಕರ್ನಾಟಕ ಮಹಿಳಾ ನೌಕರರ ಸಂಘಗಳ ಸಹಯೋಗದಲ್ಲಿ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟ ಹಮ್ಮಿಕೊಂಡ ಹಮ್ಮಿಕೊಂಡ ಯುವ ಸಮ್ಮೇಳನ ಕಾರ್ಯಕ್ರಮದಲ್ಲಿ ಕಳೆದ 5 ವರ್ಷಗಳಿಂದ ಯುವ ಸಬಲೀಕರಣಕ್ಕಾಗಿ ಸಲ್ಲಿಸಿದ ಸೇವೆಗಾಗಿ ಮಾಣಿಕಮ್ಮ ಜಮಾದಾರ ಅವರಿಗೆ ರಾಜ್ಯ ಯುವ ಪ್ರಶಸ್ತಿಯನ್ನು ಸಭಾಪತಿ ಬಸವರಾಜ್ ಹೊರಟ್ಟಿ ಅವರು ವಿತರಿಸಿದರು.
ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವ ಈಶ್ವರ ಖಂಡ್ರೆ, ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ ಆರ್. ಐಪಿಎಸ್ ಒಕ್ಕೂಟದ ಗೌರವ ಅಧ್ಯಕ್ಷ ವಿಜಯಕುಮಾರ ಸೋನಾರ, ಅಧ್ಯಕ್ಷ ಶಿವಕುಮಾರ, ಕಾರ್ಯದರ್ಶಿ ಪನಿಂದ್ರ ಪ್ರಸಾದ, ಅಖಿಲ ಕರ್ನಾಟಕ ಸರಕಾರಿ ಮಹಿಳಾ ನೌಕರರ ಸಂಘ ಅಧ್ಯಕ್ಷೆ ಮತಿ ರೋಷಣಿ ಗೌಡ, ಮೈಸೂರಿನ ಬಿಜೆಪಿ ಮುಖಂಡ ಕವೀಶ ಗೌಡ ರವರು ಉಪಸ್ಥಿತರಿದ್ದರು.
- ಕರುನಾಡ ಕಂದ



















