ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೋಷಕರ ಮನವೊಲಿಸಿ, ಮಕ್ಕಳನ್ನು ಶಾಲೆಗೆ ಕರೆತಂದ ಶಿಕ್ಷಕರು

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರಿನ ಎಸ್ ಡಬ್ಲ್ಯೂ ಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವತಿಯಿಂದ ನಾನಾ ಕಾರಣಗಳಿಂದ ಪದೇ ಪದೇ ಶಾಲೆ ಬಿಡುವ ಮಕ್ಕಳ ಮನೆ -ಮನೆಗೆ ತೆರಳಿ ಪೋಷಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರಲಾಯಿತು.
ಮುಖ್ಯಶಿಕ್ಷಕ ಮಂಜಪ್ಪ ಹೂಗಾರ ಮಾತನಾಡಿ, ಮಕ್ಕಳು ಶಾಲೆಯಿಂದ ಹೊರಗೆ ಉಳಿಯಬಾರದು ಹಾಗೂ ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರ ಉಚಿತ ಪಠ್ಯ ಪುಸ್ತಕ, ಶೂ- ಸಾಕ್ಸ್, ಮಧ್ಯಾಹ್ನದ ಬಿಸಿ ಊಟ, ಕ್ಷೀರ ಭಾಗ್ಯ ಯೋಜನೆಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗಪಡಿಸಿಕೊಂಡು ಗುಣಮಟ್ಟದ ಶಿಕ್ಷಣ ಪಡಬೇಕು, ಮಕ್ಕಳು ಶಾಲೆಯಿಂದ ಹೊರ ಉಳಿಯದೆ, ಕಡ್ಡಾಯವಾಗಿ ಶಾಲೆಗೆ ಬಂದು ಶಿಕ್ಷಣದೊಂದಿಗೆ ಉತ್ತಮ ಭವಿಷ್ಯದ ಕಡೆಗೆ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಜ್ಯೋತಿ ಎಂ.ಎಂ. ಸಂಗಮ್ಮ, ಲಕ್ಷ್ಮಿ, ವೀರೇಶ, ರಾಜಾಸಾಬ್ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!