ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯಾಪತಿ ವಿನಾಯಕ

ಭಾದ್ರಪದ ಮಾಸದ ಗಣೇಶ ಚೌತಿಯು
ಸಿದ್ಧಿ ವಿನಾಯಕನಿಗೆ ವಾಹನ ಚಿಕ್ಕ ಇಲಿಯು
ಬಹಳ ಪ್ರಸಿದ್ಧಿ ಕ್ಷಿಪ್ರ ಪ್ರಸಾದನ ಬುದ್ಧಿವಂತಿಕೆಯು
ದೇವರಿಂದ ಜನ್ಮ ಪಡೆದ ನಮ್ಮ ವಿಶ್ವಮುಖನು

ಶಿವ ಪಾರ್ವತಿಯರ ಪ್ರೀತಿಯ ಸ್ಕಂದಪೂರ್ವಜನು
ವಿದ್ಯೆಗಿವನೇ ಭೂಷಣ ನಮ್ಮ ಗಜಮುಖನು
ನಿನ್ನ ಪೂಜಿಸಿದೊಡೆ ಗಾನಪತ್ಯನಾದೆ ನಾನು
ಸದಾ ಕಾಪಾಡುವ ದೇವಲೋಕದ ದೈವ ನೀನು

ಮತ್ತೆ ಬಂದಿದೆ ಸಡಗರದ ಯಜ್ಞಕಾಯನ ಉತ್ಸವವು
ತುಂಬಿದೆ ಹರ್ಷ ಭೂಮಿಯ ತುಂಬೆಲ್ಲವು
ನಿತ್ಯ ಕಡಬು ಹೋಳಿಗೆಯ ನೈವೇದ್ಯವು
ಸ್ಥಾಪಿಸಿ ಮಣ್ಣಿನ ಗಣಪತಿಯ ಪೂಜಿಸೋಣ ನಾವು ನೀವು

ಸಿಡಿಸದಿರಿ ಜೋರಾಗಿ ಎಲ್ಲೆಡೆ ಪಟಾಕಿಗಳನ್ನು
ಗೊತ್ತಿದ್ದರೂ ನಾಶಮಾಡಬೇಡಿ ಪ್ರಕೃತಿಯ ಸೊಬಗನ್ನು
ಮಹಾ ಗಣಪತಿಯ ವಿಸರ್ಜನೆಯಲಿ ಮರೆಯದಿರಿ ಪ್ರತಿಜ್ಞೆಯನ್ನು
ನಿರ್ವಿಘ್ನತಾ ಸಿದ್ಧಿಗಾಗಿ ಮೊದಲ ಪೂಜೆ ದೇವಾ ನಿಮಗಿನ್ನು

ಸಕಲ ಕಾರ್ಯಗಳಿಗೂ ಮುಂದಿರುವ ಸಿದ್ಧಿವಿನಾಯಕನೇ
ನಂಬಿದ ಪಾಲಿನ ಭಕ್ತರ ಕೈ ಬಿಡದ ಮೂಷಿಕವಾಹನನೇ
ಭೂಮಿಯ ಮೇಲಿನ ಎಲ್ಲರ ಕಷ್ಟ ನಿವಾರಿಸುವ ವಕ್ರತುಂಡನೇ
ಭೂಲೋಕದ ಉದ್ಧಾರಕ್ಕಾಗಿ ಜನಿಸಿದ ಲಂಬೋದರನೇ

ಏಕದಂತ ಬಂದು ನಮಗೆಲ್ಲ ಹರ್ಷವ ತಂದನು
ನಲಿಯುತ ಕುಣಿಯುತ ನಾನಾವೇಷದಿ ಬಂದನು
ಗರಿಕೆಯ ಹುಲ್ಲಿನಲಿ ಸಕಲರ ಪ್ರೀತಿಯ ಕಂಡನು
ಬೇಡಿದ ವರವನು ಭಕ್ತರಿಗೆ ದಯಪಾಲಿಸಿಹನು

  • ಶ್ರೀ ಮುತ್ತು ಯ ವಡ್ಡರ ,ಶಿಕ್ಷಕರು
    ಬಾಗಲಕೋಟೆ. 9845568484
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!