ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ಬೆಂಚಮಟ್ಟಿ
ಗ್ರಾಮ ಸಮಸ್ಯೆಗಳ ಆಗರವಾಗಿದ್ದು,
ಗ್ರಾಮದ ಮುಖ್ಯ ರಸ್ತೆ ಗುಂಡಿಗಳಿಂದ ಹಾಳಾಗಿದ್ದು
ಓಡಾಟಕ್ಕೆ ತುಂಬಾ ತೊಂದರೆ ಆಗುತ್ತಿದೆ,
ಕುಡಿಯುವ ನೀರಿನ ವ್ಯವಸ್ಥೆ ಇಲ್ಲ,
ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯಗಳಿಲ್ಲ,
ಸಮುದಾಯ ಭವನಗಳಿಲ್ಲ,
ಸರಕಾರಿ ಶಾಲೆಯಲ್ಲಿ ಒಂದನೇ ತರಗತಿಗೆ 3 ವಿದ್ಯಾರ್ಥಿಗಳ ಪ್ರವೇಶವಾಗಿದೆ,
ರಸ್ತೆ ಉದ್ದಕ್ಕೂ ದಾರಿ ದೀಪಗಳಿಲ್ಲ,
ಇವೆಲ್ಲದರ ಜೊತೆಗೆ ಪ್ರಮುಖವಾಗಿ 20 ದಿನಗಳಿಂದ ಸಾರಿಗೆ ಸಂಚಾರವಿಲ್ಲದೆ ಪರದಾಡಿದ ವಿದ್ಯಾರ್ಥಿಗಳು, ಗರ್ಭಿಣಿ ಮಹಿಳೆಯರು, ವಯಸ್ಸಾದವರು, ಗ್ರಾಮಸ್ಥರು ಈ ಕುರಿತು ಮಾನ್ಯ ಶಾಸಕರಾದ ದೊಡ್ಡನಗೌಡ ಪಾಟೀಲ್ ಇವರಿಗೆ ಮನವಿ ಮಾಡಿದ್ದಾರೆ. ಬಸ್ ಸಂಚಾರದ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿ ಕುರಿ ಕಾಯುವ, ಮನೆ ಕೆಲಸ ಮಾಡುವ ಕೆಲಸದಲ್ಲಿ ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ್ದಾರೆ.
ವರದಿ ವಿಜಯಮಹಾಂತೇಶ ಬಳಿಗಾರ



















