ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ : ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ‌ ಸದಸ್ಯ ಎಫ್. ಎಸ್. ಸಿದ್ದನಗೌಡರ

ಬೆಳಗಾವಿ: ಭಾರತೀಯ ಯುವ ವೃತ್ತಿಪರರು, ಕುಟುಂಬಸ್ಥರು, ಹಿರಿಯ ಪ್ರಜೆಗಳಿಗೆ ಆರ್ಥಿಕ ರಕ್ಷಣೆಯ ಜೊತೆಗೆ ದಿನಸಿ ವಸ್ತುಗಳ ತೆರೆಗೆ ಶೂನ್ಯಕ್ಕೆ ಬಂದಿರುವದರಿಂದ ಜನಸಾಮನ್ಯರ ಜೀವನಕ್ಕೆ ಬಂಪರ್ ಕೊಡುಗೆ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ‌ ಸದಸ್ಯ ಎಫ್. ಎಸ್. ಸಿದ್ದನಗೌಡರ ಹೇಳಿದ್ದಾರೆ.
ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ ಅವರು, ಜೀವ ಉಳಿಸುವ ಔಷಧಿಗಳು, ವೈದ್ಯಕೀಯ ಸಾಧನಗಳು ಗಮನಾರ್ಹವಾಗಿ ಅಗ್ಗವಾಗಿವೆ.
ಸಾಬೂನುಗಳು ಮತ್ತು ಶ್ಯಾಂಪೂಗಳಿಂದ ಹಿಡಿದು ಬೈಸಿಕಲ್‌ಗಳು ಮತ್ತು ಕಿಚನ್‌ವೇರ್ ವರೆಗೆ, ಜಿಎಸ್‌ಟಿ ದರಗಳನ್ನು 5%ಕ್ಕೆ ಇಳಿಸಲಾಗಿದೆ.
ಹಾಲು, ಪನೀರ್, ಚಪಾಟಿಸ್, ಪರೋಟಾಸ್-ಎಲ್ಲಾ ಅಗತ್ಯ ವಸ್ತುಗಳು-ಈಗ ತೆರಿಗೆ ಮುಕ್ತವಾಗಿದೆ.
ದೇಶದ ರೈತರು ಟ್ರಾಕ್ಟರುಗಳು, ಕೃಷಿ-ಉಪಕರಣಗಳು ಮತ್ತು ರಸಗೊಬ್ಬರಗಳು ಈಗ ಕೇವಲ 5% ಜಿಎಸ್ ಟಿಗೆ ಒಳಪಡುವುದರಿಂದ ಕಡಿಮೆ ವೆಚ್ಚದಲ್ಲಿ, ಹೆಚ್ಚು ಉತ್ಪಾದನೆ ಮಾಡುವುದಾಗಿದೆ.
ಸಣ್ಣ ವ್ಯಾಪಾರಿಗಳು, ಕುಶಲಕರ್ಮಿಗಳು ಮತ್ತು ಎಂಎಸ್‌ಎಂಇಗಳು ಕಾರ್ಯಕ್ಷಮತೆ ಹೆಚ್ಚಾಗಲಿದೆ.
ರಾಜಕಿಯಕ್ಕಿಂತ ಮೊದಲು ರಾಷ್ಟ್ ಎನ್ನುವ ಹಾಗೆ, ಸಹಕಾರಿ ತತ್ವದಡಿ
ಜನರ ಪರ, ಬಡವರ ಪರ, ಮಧ್ಯಮವರ್ಗದ ಪರವಾದ ನಿರ್ಣಯ ಇದಾಗಿದ್ದು ನೇರವಾಗಿ ಜೀವನ ವೆಚ್ಚವನ್ನು ಕಡಿಮೆ ಮಾಡಿದಂತಾಗಿದೆ.
ಎಲ್ಲಾ ಜೀವನ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಮೇಲೆ ಜಿಎಸ್ಟಿ ವಿನಾಯಿತಿ ನಿಡಿದ್ದರಿಂದ‌ ಜೀವನ ರಕ್ಷಣೆ ನೀಡಿದಂತಾಗಿದೆ.
ಶಿಕ್ಷಣಕ್ಕೆ‌ ಸಂಬಂಧಿಸಿದ ನಕ್ಷೆಗಳು ಅಟ್ಲಾಸ್ಗಳು, ಗ್ಲೋಬ್ಗಳು, ಪೆನ್ಸಿಲ್ಗಳು, ಕ್ರೇಯಾನ್ಗಳು, ನೋಟ್ಬುಕ್ ಶೂನ್ಯ ಜಿ ಎಸ್ ಟಿ ಗೆ ಒಳಪಡುವುದರೊಂದಿಗೆ ಶಿಕ್ಷಣ ವಲಯಕ್ಕೆ ಆಧ್ಯತೆ ನೀಡಿದಂತಾಗಿದೆ.
ಎಲೆಕ್ಟ್ರಾನಿಕ್ ವಸ್ತಗಳ ಮೇಲಿನ ಜಿ ಎಸ್ ಟಿ 28% ರಿಂದ 18%ಕ್ಕೆ ಇಳಿದಾಗಿದೆ. ಹನಿ ನೀರಾವರಿ ವ್ಯವಸ್ಥೆಗಳು ಮತ್ತು ಸ್ಪ್ರಿಂಕ್ಲರ್ಗಳು
ಸಣ್ಣ ಡೀಸೆಲ್ ಇಂಜಿನ್ ಗಳು, ಟ್ರ್ಯಾಕ್ಟರ್ಗಳು ನಿರ್ದಿಷ್ಟ ಜೈವಿಕ ಕೀಟನಾಶಕಗಳು, ಸೂಕ್ಷ್ಮ ಪೋಷಕಾಂಶಗಳು-ಕೃಷಿ, ತೋಟಗಾರಿಕೆ ಅಥವಾ ಅರಣ್ಯ ಯಂತ್ರಗಳು ಮಣ್ಣಿನ ಸಿದ್ಧತೆ, ಕೃಷಿ, ಕೊಯ್ಲು ಮತ್ತು ಒಕ್ಕಣಿಕೆ ಯಂತ್ರಗಳ ಜಿ ಎಸ್ ಟಿ ಕಡಿಮೆಯಾಗಿದೆ.
ರಸಗೊಬ್ಬರ ಕಚ್ಚಾ ವಸ್ತುಗಳಾದ ಸಲ್ಫ್ಯೂರಿಕ್ ಆಮ್ಲ, ನೈಟ್ರಿಕ್ ಆಮ್ಲ, ಅಮೋನಿಯಾ, ಜೈವಿಕ ಕೀಟನಾಶಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳು 18% ಅಥವಾ 12% ರಿಂದ 5% ಕ್ಕೆ ಇಳಿದಿದ್ದು ಕೃಷಿ ಚಟುವಟಿಕೆಗಳಿಗೆ ಬೂಸ್ಟ್ ನೀಡಿದಂತಾಗಿದೆ.
ರಕ್ಷಣಾ ವಲಯದ ವಿಮಾನ ಸಿಮ್ಯುಲೇಟರ್ಗಳು,
ಗುರಿ ಸಿಮ್ಯುಲೇಟರ್ಗಳನ್ನು 18% ರಿಂದ ಶೂನ್ಯ ಜಿಎಸ್ಟಿಗೆ ಇಳಿಸಲಾಗಿದ್ದು ದೇಶದ ಭದ್ರತೆ ಸುಭದ್ರದ ಕಡೆ ಸಾಗಿದೆ.
ತೆರಿಗೆ ವಿವಾದಗಳ ತ್ವರಿತ ಪರಿಹಾರಕ್ಕಾಗಿ 2025 ರ ಅಂತ್ಯದ ವೇಳೆಗೆ ಜಿ ಎಸ್ ಟಿ ಮೇಲ್ಮನವಿ ನ್ಯಾಯಮಂಡಳಿ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದ್ದಾರೆ.

ವರದಿ ಮಂಜು. ಎಂ. ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!