ಬೆಳಗಾವಿ: ಅಥಣಿ ನಗರದ ಭೋಜರಾಜ ಕ್ರೀಡಾಂಗಣದಲ್ಲಿ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ ಹಾಗೂ ಶ್ರೀ ಶಿವಾನಂದ ಭಾರತಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ತಾಲೂಕ ಮಟ್ಟದ ಪದವಿ ಪೂರ್ವ ಕ್ರೀಡಾಕೂಟವನ್ನು ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ್ ಸವದಿ ಅವರು ಉದ್ಘಾಟಿಸಿದ ನಂತರ ಮಾತನಾಡಿದ ಶಾಸಕರು ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ , ಸೋತವರು ಸಹ ಶ್ರೇಷ್ಠರು ಸೋಲು ಗೆಲುವಿನ ಮೆಟ್ಟಿಲು ಎಂದು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಇದೇ ವೇಳೆ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಪರಪ್ಪ ಸವದಿ , ಚಿಕ್ಕೋಡಿಯ ಉಪನಿರ್ದೇಶಕರಾದ ಪಾಂಡುರಂಗ ಭಂಡಾರೆ , ಡಾ|| ರಾಮ್ ಕುಲಕರ್ಣಿ, ಶ್ರೀ ಶಿವಾನಂದ ಭಾರತಿ ಮಹಾವಿದ್ಯಾಲಯ ಅಧ್ಯಕ್ಷರಾದ ಬಸವರಾಜ್ ತೇಲಿ, ಮಲ್ಲೇಶ್ ಸವದಿ, ಎಂ ಪಿ ಮೈತ್ರಿ, ಅಜಯ್ ಮೋನೆ, ಜಿ ಎಂ ಚನಗೊಂಡ, ರಮೇಶ್ ಸವದಿ, ಬಸವರಾಜ್ ಸಾವಡಕರ, ಹಾಗೂ ಶಿಕ್ಷಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮತ್ತು ಗಣ್ಯಮಾನ್ಯರು ಉಪಸ್ಥಿತರಿದ್ದರು.
ವರದಿ ವಿಠ್ಠಲ ಖೋಕಾಟೆ



















