ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ ಡಿಸಿಸಿ ಬ್ಯಾಂಕ್‌, ಇನ್ಮುಂದೆ ರೈತರಿಗೆ UPI ಸೌಲಭ್ಯ, ಯಾವಾಗ ಶುರು ?

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆಗಳನ್ನು ಪ್ರಾರಂಭಿಸುತ್ತಿದೆ. ಇನ್ಮುಂದೆ ಗೂಗಲ್‌ ಪೇ, ಫೋನ್‌ ಪೇ, ಪೇಟಿಎಂಗಳಲ್ಲಿಯು ಡಿಸಿಸಿ ಬ್ಯಾಂಕ್‌ ಖಾತೆಯಿಂದ ಹಣ ಪಾವತಿಸುವ ಸೌಲಭ್ಯ ದೊರೆಯಲಿದೆ.
ಡಿಸಿಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಆರ್‌. ಎಂ. ಮಂಜುನಾಥಗೌಡ, ಈಗಾಗಲೇ ಡಿಸಿಸಿ ಬ್ಯಾಂಕ್‌ನ ಮೊಬೈಲ್‌ ಆಪ್‌ ಮೂಲಕ ಗ್ರಾಹಕರು ತಮ್ಮ ಖಾತೆಯನ್ನು ನಿಭಾಯಿಸುತ್ತಿದ್ದಾರೆ. ನೆಫ್ಟ್‌, ಆರ್‌ಟಿಜಿಎಸ್‌ ವ್ಯವಹಾರ ಮಾಡುತ್ತಿದ್ದಾರೆ. ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಯುಪಿಐ ಸೇವೆಗಳ ಇನ್ನೊಂದು ತಿಂಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಈಗಾಗಲೇ ಇದರ ಪರಿಕ್ಷಾರ್ಥ ಪ್ರಯೋಗಗಳು ನಡೆಯುತ್ತಿವೆ.

– ಆರ್‌. ಎಂ. ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ,

ರೈತರ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ವ್ಯವಸ್ಥೆ ಕಲ್ಪಿಸಲು ಮೊಬೈಲ್‌ ಎಟಿಎಂ ವಾಹನದ ಸೌಲಭ್ಯ ಕಲ್ಪಿಸಲಾಗಿದೆ. ಈಗಾಗಲೇ ಒಂದು ಮೊಬೈಲ್‌ ಎಟಿಎಂ ವಾಹನ ಸಂಚರಿಸುತ್ತಿದೆ. ಸದ್ಯದಲ್ಲೇ ಮತ್ತೊಂದು ಮೊಬೈಲ್‌ ಎಟಿಎಂ ವಾಹನಕ್ಕೆ ಚಾಲನೆ ನೀಡಲಾಗುತ್ತದೆ. ಇದರಿಂದ ಬ್ಯಾಂಕಿಂಗ್‌ ವ್ಯವಸ್ಥೆ ಮತ್ತಷ್ಟು ಜನರಿಗೆ ತಲುಪಲಿದೆ ಎಂದು ತಿಳಿಸಿದರು.

ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ, ಪುರದಾಳು ಗ್ರಾಮಗಳ ವ್ಯಾಪ್ತಿಯಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆ ವಿಸ್ತರಿಸಲು ಮೊಬೈಲ್‌ ಎಟಿಎಂ ವಾಹನಕ್ಕೆ ಚಾಲನೆ ನೀಡಲಾಗುತ್ತದೆ. ವಾರದಲ್ಲಿ ಒಂದು ದಿನ ಅಥವಾ ಎರಡು ದಿನ ಈ ಭಾಗಕ್ಕೆ ಮೊಬೈಲ್‌ ಎಟಿಎಂ ವಾಹನ ಹೋಗಲಿದೆ. ಇದರಿಂದ ಆ ಭಾಗದ ರೈತರು ಎಟಿಎಂ ಕಾರ್ಡ್‌ ಬಳಸಿ ತಮ್ಮ ಬ್ಯಾಂಕಿಂಗ್‌ ವ್ಯವಹಾರ ನಡೆಸಬಹುದು.

– ಆರ್‌. ಎಂ. ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಸಿಇಒ ರಾಜಣ್ಣ ರೆಡ್ಡಿ. ಸಿ, ಬ್ಯಾಂಕಿನ ನಿರ್ದೇಶಕರಾದ ಬಸವರಾಜ್. ಡಿ. ಎಲ್‌, ಚಂದ್ರಶೇಖರ.ಎಸ್‌.ಪಿ, ರುದ್ರೇಗೌಡ.ಕೆ.ಪಿ, ಪರಮೇಶ ಎಂ.ಎಂ, ಮರಿಯಪ್ಪ .ಎಸ್‌. ಕೆ, ಸುಧೀರ್. ಜಿ. ಎನ್‌, ಮಹಾಲಿಂಗಯ್ಯ ಶಾಸ್ತ್ರಿ, ಎಸ್‌.ಎನ್, ರವೀಂದ್ರ.ಹೆಚ್‌.ಎಸ್‌, ದುಗ್ಗಪ್ಪಗೌಡ ಕೆ.ಪಿ ಇದ್ದರು.

ವರದಿ : ಪ್ರಸಾದ್ ಹೆಚ್ ಬಿ, ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!