ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ

ಚಾಮರಾಜನಗರ /ಹನೂರು :ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗತಾಪುರ ಗ್ರಾಮದ ಮುಸ್ಲಿಂ ಸಮುದಾಯದವರು ಶನಿವಾರದಂದು
ಶ್ರದ್ಧಾ, ಭಕ್ತಿಯಿಂದ ಈದ್ ಮಿಲಾದ್ ಆಚರಿಸಿದರು.

ಬೆಳಿಗ್ಗೆ ಮಸೀದಿಯಲ್ಲಿ ಪುರುಷರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಗ್ರಾಮದ ಮಸೀದಿಯಲ್ಲಿ ಮುಸ್ಲಿಮರು ಆಟೊ ಮೇಲೆ ಮೆಕ್ಕಾ ಮದೀನಾ, ಪ್ರತಿಕೃತಿ ಇರಿಸಿ ಮೆರವಣಿಗೆ ಮಾಡಲಾಯಿತು.

ಈ ಮೆರವಣಿಗೆಯಲ್ಲಿ ನೂರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು. ಚಿಣ್ಣರರಿಂದ ವಯಸ್ಕರವರೆಗೆ ಮೆರವಣಿಗೆಯಲ್ಲಿ ಭಾಗವಹಿಸಿ, ಸಂಗೀತಕ್ಕೆ ಭಕ್ತಿಯಿಂದ ಭಾವದಿಂದ ಹೆಜ್ಜೆಗಳು ಹಾಕಿದರು. ಮೆರವಣಿಗೆಯಲ್ಲಿ ರಾಷ್ಟ್ರಧ್ವಜ, ಹಸಿರು ವರ್ಣದ ಧ್ವಜ, ಹಾಗೂ ಕರ್ನಾಟಕದ ಹಳದಿ ಮತ್ತು ಕೆಂಪು ವರ್ಣದ ಧ್ವಜ ಕೂಡಾ ರಾರಾಜಿಸಿದವು. ಹಾಗೆಯೇ ದೇವರ ಹೆಸರಲ್ಲಿ ಆರಾಧನೆ ಮಾಡುತ್ತಾ, ಮಹ್ಮದ್ ಪೈಗಂಬರ್ ಸಂದೇಶಗಳ ಕುರಿತು ಘೋಷಣೆ ಕೂಗಿದರು.

ಚಿಗತಾಪುರ ಗ್ರಾಮದ ಮಸೀದಿ ಕಡೆಯಿಂದ ಆರಂಭಗೊಂಡ ಮೆರವಣಿಗೆ ಗ್ರಾಮದ ಎಲ್ಲಾ ಬೀದಿ ಬೀದಿಗಳಲ್ಲಿ ತೆರಳಿ ಸಮಾರೋಪ ಆಯಿತು. ನೂರಾರು ಜನ ಮೆರವಣಿಗೆಯಲ್ಲಿ ಪಾಲ್ಗೊಂಡು ಹಬ್ಬಕ್ಕೆ ಮೆರಗು ತಂದರು. ಗ್ರಾಮದಲ್ಲಿ ಶಾಂತಿ ಕಾಪಾಡಲು ಹನೂರು ಪೊಲೀಸ್ ಠಾಣೆ ಸಿಬ್ಬಂದಿ ವತಿಯಿಂದ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮತ್ತು ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಸ್ಲಿಂ ಕಮಿಟಿ ಅಧ್ಯಕ್ಷ ರೇಹಮಾನ್, ಸೆಕ್ರೆಟರಿ ಅಮ್ಜದ್ ಖಾನ್, ಸೈಯದ್ ನಜ್ರು, ಅಬ್ದುಲ್ ಆರೀಫ್, ಪತ್ರಕರ್ತ ಶಾರುಕ್ ಖಾನ್, ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷ ತೌಸಿಪ್ ಅಹಮದ್, ಅಪ್ಸರ್ ಬೇಗ್, ಅಲ್ಲಾಬಕಶ್, ಶಾದಬ್ ಖಾನ್, ಸಲ್ಮಾನ್ ಖಾನ್, ಅಯೂಬ್ ಖಾನ್, ಜೀಯಾಉಲ್ಲಾ, ಸೇರಿದಂತೆ ಮತ್ತಿತರರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!