
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಅಗರಖೇಡ 2024-2025 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾ ಸಭೆಯನ್ನು ಆಯೋಜಿಸಲಾಗಿದ್ದು, ನಮ್ಮ ಸಂಘದ ಸರ್ವ ಸದಸ್ಯರಿಗೆ ಈ ನೋಟಿಸಿನ ಮೂಲಕ ತಿಳಿಸುವುದೇನೆಂದರೆ ನಮ್ಮ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯು ದಿನಾಂಕ 22-09-2025 ರಂದು ಸೋಮವಾರ ಸಾಯಂಕಾಲ 4 ಗಂಟೆಗೆ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಶ್ರೀಶೈಲ್ ಲ.ಸಾವಳಗಿ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಕಾರಣ ಸರ್ವ ಸದಸ್ಯರು ಹಾಜರಿರಲು ವಿನಂತಿಸಿಕೊಳ್ಳಲಾಗಿದೆ. ಅನೇಕ ವಿಷಯಗಳನ್ನು ಚರ್ಚಿಸುವ ಸಲುವಾಗಿ ಸಭೆ ಕರೆಯಲಾಗಿದೆ. ಕಾರಣ ಎಲ್ಲಾ ಸದಸ್ಯರು ಸಕಾಲಕ್ಕೆ ಹಾಜರಿರಬೇಕೆಂದು ವಿನಂತಿಸಿಕೊಳ್ಳಲಾಗಿದೆ.
ವಿಶೇಷ ಸೂಚನೆ
1) ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಯಾವುದೇ ವಿಷಯಗಳನ್ನು ಚರ್ಚಿಸುವದಿದ್ದಲ್ಲಿ ಮುಂಚಿತವಾಗಿ ಲಿಖಿತ ಮೂಲಕ ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ತಿಳಿಸಿದಲ್ಲಿ ಅಧ್ಯಕ್ಷರ ಅನುಮತಿ ಮೇರೆಗೆ ಅಂತಹ ವಿಷಯಗಳನ್ನು ಚರ್ಚಿಸಲು ಅವಕಾಶ ಕೊಡಲಾಗುವುದು.
2) ಕಟುಬಾಕಿದಾರರು ಸರ್ವಸಾಧಾರಣ ಸಭೆಗೆ ಹಾಜರಾಗಬಹುದು ಆದರೆ ಯಾವುದೇ ವಿಷಯದ ಬಗ್ಗೆ ಚರ್ಚೆ ಮಾಡುವ ಅಧಿಕಾರ ಅವರಿಗೆ ಇರುವುದಿಲ್ಲ. ಎಂದು ಪ್ರಕಟಣೆಯ ಮೂಲಕ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಎಸ್. ಎನ್. ಬಡಿಗೇರ್ ಇವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9535370040 ಅಥವಾ 9900106430 ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ವರದಿ ಮನೋಜ್ ನಿಂಬಾಳ



















