ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನ ಪ್ರಯುಕ್ತ ಉಚಿತ ಕ್ಷೌರ ಸೇವೆ

ಸತತವಾಗಿ ಆರು ವರ್ಷಗಳಿಂದ ಡಾ.ಸಿದ್ದ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನದಂದು ಉಚಿತ ಕ್ಷೌರ ಸೇವೆ ಸಲ್ಲಿಸುತ್ತಿರುವ ಹಡಪದ ಅಪ್ಪಣ್ಣ ಸಮಾಜದ ಸೇವಕ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್

ಡಾ.ಸಿದ್ಧ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ 61ನೇ ವರ್ಷದ ಜನ್ಮ ದಿನದ ನಿಮಿತ್ತವಾಗಿ ಕಲಬುರಗಿ ಜಿಲ್ಲೆಯ ನಿರ್ಗತಿಕರ ಕೇಂದ್ರ ದಲ್ಲಿ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಉಚಿತ ಕ್ಷೌರ ಸೇವೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಸಮಾಜ ಸೇವಕ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಸಂಘಟನಾ ಕಾರ್ಯದರ್ಶಿಗಳು ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರ ನೇತೃತ್ವದಲ್ಲಿ ಇದೇ ಅಕ್ಟೋಬರ್ 1 ರಂದು ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಸಿದ್ದ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಷ.ಬ್ರ.ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ 61ನೇ ವರ್ಷದ ಹುಟ್ಟು ಹಬ್ಬದ ನಿಮಿತ್ತವಾಗಿ ಆರು ವರ್ಷಗಳಿಂದ ಸತತವಾಗಿ ಕಲಬುರಗಿ ನಗರದ ಬಿದ್ದಾಪೂರ ಕಾಲೋನಿಯ. ಅನಾಥ ನಿರ್ಗತಿಕರ (ಕೇಂದ್ರ) ದಲ್ಲಿ ಪೂಜ್ಯರ ಜನ್ಮ ದಿನದಂದು ಉಚಿತ ಕ್ಷೌರ ಸೇವೆ ಸಲ್ಲಿಸಲಾಗುತ್ತದೆ. ಈ ಸಂಧರ್ಭದಲ್ಲಿ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ಹಿರಿಯರು, ಯುವಕ ಮಿತ್ರರು ಮತ್ತು ಕಾಯಕ ಬಂಧುಗಳು ಸೇರುವ ಸಾಧ್ಯತೆ ಇದೆ. ನಿರ್ಗತಿಕರ ಕೇಂದ್ರ ಹೆಚ್ಚು ಜನತೆಗೆ ಪೂಜ್ಯರ ಜನ್ಮ ದಿನದಂದು ಉಚಿತ ಸೇವೆ ಸಲ್ಲಿಸಲಾಗುವುದು ಎಂದು ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಒಟ್ಟು 14 ವಿವಿಧ ಕಡೆಯಲ್ಲೂ ಉಚಿತ ಕ್ಷೌರ ಸೇವೆ ಸಲ್ಲಿಸಿ ಒಟ್ಟು 1465 ಕ್ಕೂ ಹೆಚ್ಚು ನಿರ್ಗತಿಕರ ಕೇಂದ್ರದಲ್ಲಿ ಈ ಬಾರಿ 15 ಕಡೆ ಸೇರಿದಂತೆ ನೂರಾರು ನಿರ್ಗತಿಕರಿಗೆ ಈ ವಿಭಿನ್ನವಾಗಿ ಉಚಿತ ಕ್ಷೌರ ಸೇವೆ ಮಾಡುವ ಮೂಲಕ ದೇವರ ಸೃಷ್ಟಿ ಮಾನವ ಕ್ಷೌರಿಕರ ಸೃಷ್ಟಿ. ಸುಂದರ ಮಾನವ ಕಾಯಕದ ಜೊತೆಗೆ ಉಚಿತ ಕ್ಷೌರ ಸೇವೆ ಸಲ್ಲಿಸುತ್ತಿರುವ ಈ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಸೇವಕ ಈ ರೀತಿ ಪೂಜ್ಯರ ಹುಟ್ಟು ಹಬ್ಬವನ್ನು ವಿಶೇಷವಾಗಿ ಸೇವೆ ಸಲ್ಲಿಸಲಾಗುತ್ತದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!