ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನುದಾನ ಬಳಕೆ, ಸುಲಭ ಲಭ್ಯತೆ; ಶಾಸಕರಿಗೆ ವಿಕಲಚೇತನರ ಮನವಿ

ಗುರುಮಠಕಲ್: ಅ.8 ಶೇ. 5 ರ ಅನುದಾನ ಬಳಕೆಗೆ ಸಂಬಂಧಿಸಿದಂತೆ ಮತ್ತು ಅದರ ಲಭ್ಯತೆಯ ಕುರಿತು ಶಾಸಕ ಶರಣಗೌಡ ಕಂದಕೂರು ಅವರಲ್ಲಿ ಎಪಿಡಿ ಸಂಸ್ಥೆಯ ಅಧಿಕಾರಿಗಳು ಮತ್ತು ವಿಶೇಷಚೇತನರು ಮನವಿ ಮಾಡಿದರು.

ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಕೆ.ಡಿ.ಪಿ.ಮಾಸಿಕ ಹಾಗೂ ತ್ರೈಮಾಸಿಕ ಪರಿಶೀಲನಾ ಸಭೆಗಳಲ್ಲಿ ಎಲ್ಲಾ ಇಲಾಖೆಗಳಲ್ಲಿ ವಿಕಲಚೇತನರಿಗೆ ಸಂಬಂಧಿಸಿದ 5% ಅನುದಾನದ ಬಳಕೆ ಮತ್ತು ಸುಲಭ ಲಭ್ಯತೆಯ ಅನುಷ್ಠಾನದ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸಲು ಅವರು ಮನವಿ ಮಾಡಿದರು.

ಶಾಸಕರ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಕಳೆದ ತಿಂಗಳು 19 ನೇ ತಾರೀಖಿನಂದು ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನಕ್ಕೆ ಯುಡಿಐಡಿ ಕಾರ್ಡ್ ಶಿಬಿರವನ್ನು ಆಯೋಜಿಸಲಾಗಿತ್ತು. ಇದರ ಪರಿಣಾಮವಾಗಿ ಒಟ್ಟಾರೆ 98 ಜನ ವಿಕಲಚೇತರನು ಇದರ ಸದುಪಯೋಗವನ್ನು ಪಡೆದ ಪರಿಣಾಮವಾಗಿ ಶಾಸಕರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಪಿಡಿ ಸಂಸ್ಥೆಯ ಸಂಯೋಜಕ ವಿರೂಪಾಕ್ಷ ಮಾಲಿಪಾಟೀಲ, ಜೀವನ ಉಪಯೋಗ ವಿಭಾಗದ ಶಿವಯೋಗಪ್ಪ, ಅರ್ ಪಿಡಿ ಸಂಸ್ಥೆಯ ಸಿದ್ದನಗೌಡ ನಜರಾಪುರ, ರಮೇಶ್ ಮಾನೆ,ಹಣಮಂತ, ಚಂದ್ರಪ್ಪ, ಸ್ವಾಮಿ ಆಯ್ಯಪ್ಪ, ಚನ್ನಪ್ಪ, ಗಂಗಪ್ಪ, ಮೋನಪ್ಪ ಹಾಜರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!