ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ತಾಲೂಕು ಅಕ್ಕಿ ವ್ಯಾಪಾರಸ್ಥರ ಸಂಘದ ನೂತನ ಅಧ್ಯಕ್ಷರಾಗಿ ಟಿ. ಬದ್ರಿನಾಥ ಶ್ರೇಷ್ಠಿ ಆಯ್ಕೆ

ಬಳ್ಳಾರಿ/ ಕಂಪ್ಲಿ : ಕಳೆದ ದಶಕದ ಇತಿಹಾಸವನ್ನು ಹೊಂದಿರುವ ಕಂಪ್ಲಿ ತಾಲ್ಲೂಕು ಅಕ್ಕಿ ವ್ಯಾಪಾರಸ್ಥರ ಸಂಘಕ್ಕೆ ಪಟ್ಟಣದ ಎಪಿಎಂಸಿಯಲ್ಲಿ ಬುಧವಾರ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕಳೆದ ವಾರ ನಡೆದ ತಾಲ್ಲೂಕಿನ ಎಲ್ಲಾ ಅಕ್ಕಿ ವ್ಯಾಪಾರಸ್ಥರ ಸದಸ್ಯರ ಮಹಾಜನ ಸಭೆಯಲ್ಲಿ ಸಂಘಕ್ಕೆ 9 ಜನ ನೂತನ ನಿರ್ದೇಶಕರಗಳನ್ನು ಆಯ್ಕೆ ಮಾಡಲಾಗಿತ್ತು. ಈಗ ನೂತನ ನಿರ್ದೇಶಕರುಗಳು ಸಭೆ ಸೇರಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಸಂಘದ ನೂತನ ಅಧ್ಯಕ್ಷರಾಗಿ ಟಿ. ಬದ್ರಿನಾಥ್ ಶ್ರೇಷ್ಠಿ, ಉಪಾಧ್ಯಕ್ಷರಾಗಿ ಸಣಾಪುರದ ಜಿ.ಕುಮಾರಸ್ವಾಮಿ, ಕಾರ್ಯದರ್ಶಿಯಾಗಿ ಬಿ.ಶೇಕ್ಷಾವಲಿ, ಖಜಾಂಚಿಯಾಗಿ ಕೆ.ಯಮನೂರಪ್ಪ, ಸಂಚಾಲಕರಾಗಿ ಅಗಳಿ ಪಂಪಾಪತಿ, ನಿರ್ದೇಶಕರಾಗಿ ಎಂ.ಬ್ರಹ್ಮಯ್ಯ ಬಾಬು, ವಿ.ರಾಮಲಿಂಗಯ್ಯ, ಜಿ.ಯಲ್ಲಪ್ಪ, ವಿ.ಬಸವರಾಜ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ನೂತನ ಅಧ್ಯಕ್ಷ ಟಿ.ಬದ್ರಿನಾಥ್ ಶ್ರೇಷ್ಠಿ ಮಾತನಾಡಿ, ತಾಲ್ಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ತಾಲ್ಲೂಕು ಅಕ್ಕಿ ವ್ಯಾಪಾರಸ್ಥರ ಸಂಘವು ಕಾರ್ಯ ನಿರ್ವಹಿಸುತ್ತಿದ್ದು, ಸಂಘದಲ್ಲಿ 140 ಜನ ವ್ಯಾಪಾರಸ್ಥ ಸದಸ್ಯರಿದ್ದು, ಸಂಘದ ಸದಸ್ಯರ ಹಿತರಕ್ಷಣೆಗಾಗಿ ಸಂಘವು ಕಾರ್ಯನಿರ್ವಹಿಸಲಿದೆ. ಜೊತೆಗೆ ರೈತರ ಹಾಗೂ ವ್ಯಾಪಾರಸ್ಥರ ನಡುವೆ ಸೇತುವೆಯಾಗಿ ಸಂಘವು ಕಾರ್ಯನಿರ್ವಹಿಸಲಿದ್ದು, ಸಂಘದ ಸದಸ್ಯರು ಹಾಗೂ ರಯತರು, ಅಕ್ಕಿ ಗಿರಣಿಗಳ ಮಾಲೀಕರು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ರೈತ ಮುಖಂಡರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!