ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಲಕಿಯ ಅತ್ಯಾಚಾರ, ಕೊಲೆ ಖಂಡನೀಯ :ತೇಜಸ್ವಿ ನಾಗಲಿಂಗಸ್ವಾಮಿ

ಪೋಲಿಸ್ ಇಲಾಖೆ ನೈಟ್ ಬೀಟ್ ನಲ್ಲಿ ಕೆಲವು ಬದಲಾವಣೆ ತಂದರೆ ಇಂತಹ ಕೃತ್ಯಗಳನ್ನು ತಡೆಯ ಬಹುದು, ಮೈಸೂರಿನ ವಸ್ತು ಪ್ರದರ್ಶನ ಮೈದಾನ ಬಳಿ ನಡೆದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ‌ ಪ್ರಕರಣ ತೀವ್ರ ಖಂಡನೀಯ ,ಆರೋಪಿಗೆ ಕೂಡಲೇ ಕಠಿಣ ಶಿಕ್ಷೆ ನೀಡಬೇಕು, ಇಂತಹ ಅತ್ಯಾಚಾರ ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಬಿಕ್ಷುಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಮೈಸೂರಿನ ಹೃದಯ ಭಾಗದಲ್ಲಿ ಇಂತಹ ಹೇಯಕೃತ್ಯ ನಡೆದಿದ್ದು ಅತ್ಯಂತ ಆತಂಕ ಉಂಟು ಮಾಡಿದೆ,
ಎರಡು ದಿನಗಳ ಹಿಂದೆ ಇದೇ ಸ್ಥಳದಲ್ಲಿ ವ್ಯಕ್ತಿ ಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು, ಅದಾದ ಎರಡೇ ದಿನದಲ್ಲಿ ಆದೆ ಸ್ಥಳದ ಆಸುಪಾಸಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿರುವುದು ಪೋಲಿಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತದೆ ,ಬಾಲಕಿಯ ಕುಟುಂಬಕ್ಕೆ ಪರಿಹಾರವನ್ನು ಘೋಷಿಸಿ, ಈ ಪ್ರಕರಣವನ್ನು ಪೋಲಿಸ್ ಇಲಾಖೆ ಅತ್ಯಂತ ಸೂಕ್ಷ್ಮವಾಗಿ ಮತ್ತು ಗಂಭೀರವಾಗಿ ಪರಿಗಣಿಸಬೇಕು, ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರುವ ಮೂಲಕ ರಾಜ್ಯದಲ್ಲಿ ಇಂತಹ ಅತ್ಯಾಚಾರ ಪ್ರಕರಣಗಳು ತಡೆಗಟ್ಟಬೇಕೆಂದು ತೇಜಸ್ವಿ ನಾಗಲಿಂಗಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!