ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ :ಸಾಲಿ

ಕಲಬುರಗಿ/ ಚಿತ್ತಾಪುರ : ಮತಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ಕೋಲಿ, ಕಬ್ಬಲಿಗ ಸಮಾಜದ ಕುಲಗುರು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ತಾಲೂಕು ಕೋಲಿ ಸಮಾಜದ ನೇತೃತ್ವದಲ್ಲಿ ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಮಾನವ ಸರಪಳಿ ನಿರ್ಮಿಸಿ ಟೈರ್ ಗೆ ಬೆಂಕಿ ಹಚ್ಚಿ, ರಸ್ತೆ ತಡೆ ಪ್ರತಿಭಟನೆ ನಡೆಸಿದ ಮುಖಂಡರು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಂತರ ಕೋಲಿ ಸಮಾಜದ ಹಿರಿಯ ಮುಖಂಡ ಹಾಗೂ ಪಿಎಲ್‌’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಮುತ್ತಗಾ ಗ್ರಾಮದಲ್ಲಿ ಸ್ಥಾಪಿಸಿದ್ದ ಕೋಲಿ, ಕಬ್ಬಲಿಗ ಸಮಾಜದ ಕುಲಗುರು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಕಿಡಿಗೇಡಿಗಳು ಅ. 9 ರಾತ್ರಿ ಭಗ್ನಗೊಳಿಸಿರುವ ದುಷ್ಕೃತ್ಯವನ್ನು ಚಿತ್ತಾಪುರ ತಾಲೂಕು ಕೋಲಿ ಸಮಾಜವು ಉಗ್ರವಾಗಿ ಖಂಡಿಸುತ್ತದೆ. ಬಸವಾದಿ ಶಿವಶರಣರಲ್ಲಿಯೆ ನಿಜಶರಣ ಎಂಬ ಖ್ಯಾತಿ ತಮ್ಮದಾಗಿಸಿಕೊಂಡಿರುವ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ ಹಾಗೂ ಅವಮಾನ ಘಟನೆಯು ಇಡೀ ಕೋಲಿ, ಕಬ್ಬಲಿಗ ಸಮಾಜದ ಸ್ವಾಭಿಮಾನಕ್ಕೆ ಅಪಮಾನ ಮತ್ತು ಸಮಾಜದ ಜನತೆಯ ಭಾವನೆಗಳಿಗೆ ತೀವ್ರ ಧಕ್ಕೆಯುಂಟಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ಸಾರ್ವಜನಿಕ ಶಾಂತಿಗೆ, ಕೋಮು ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುವ ಷಡ್ಯಂತರ ರೂಪಿಸಿ ಅಶಾಂತಿಯ ಮತ್ತು ಕೋಮು ಸಾಮರಸ್ಯ ಕದಡಿದ್ದನ್ನು ಮತ್ತು ಕೋಲಿ ಸಮಾಜದ ಜನತೆಯ ಭಾವನೆಗಳನ್ನು ಕೆರಳಿಸಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಗೌರವಾಧ್ಯಕ್ಷ ರಾಮಲಿಂಗ ಬಾನರ್‌
ಗೌರವಾಧ್ಯಕ್ಷ ರಾಮಲಿಂಗ ಬಾನರ್‌ ಮಾತನಾಡಿ, ಆರೋಪಿ ಯಾವುದೇ ಜಾತಿ ಜನಾಂಗಕ್ಕೆ ಸೇರಿರಲಿ ತಾರತಮ್ಯ ಮಾಡದೇ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ಮತ್ತು ಅಂತಹ ಕುಕೃತ್ಯ ಎಸಗಲು ಪರೋಕ್ಷವಾಗಿ ಪ್ರಚೋದನೆ ನೀಡಿರುವ ಸಮಾಜ ವಿರೋಧಿ ಶಕ್ತಿಗಳನ್ನು ಗುರುತಿಸಿ ಮತ್ತು ಶೀಘ್ರ ಪತ್ತೆ ಹಚ್ಚಿ ಕಾನೂನು ಪ್ರಕಾರ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಒಂದು ವೇಳೆ ಆರೋಪಿಗಳ ಪತ್ತೆ ಮತ್ತು ಬಂಧನಕ್ಕೆ ವಿಳಂಬ ಮಾಡಿದರೆ ಕೋಲಿ ಕಬ್ಬಲಿಗ ಸಮಾಜವು ಉಗ್ರ ಸ್ವರೂಪದ ಹೋರಾಟ, ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹಿರಿಯ ಮುಖಂಡರಾದ ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರ, ಸುರೇಶ ಬೆನಕನಳ್ಳಿ, ತಾಲೂಕು ಯುವ ಅಧ್ಯಕ್ಷ ರಾಜೇಶ ಹೋಳಿಕಟ್ಟಿ, ಪ್ರಭು ಹಲಕರ್ಟಿ ಅವರು ಮಾತನಾಡಿದರು.
ನಗರ ಅಧ್ಯಕ್ಷ ಪ್ರಭು ಹಲಕರ್ಟಿ ಮನವಿ ಪತ್ರ ಓದಿದರು.
ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಹಿರಿಯ ಮುಖಂಡ ಮಲ್ಲಿಕಾರ್ಜುನ ಎಮ್ಮೆನೋರ್, ಪ್ರಧಾನ ಕಾರ್ಯದರ್ಶಿ ಕರಣಕುಮಾರ ಬೂನಿ ಅಲ್ಲೂರ್, ನಗರ ಯುವ ಅಧ್ಯಕ್ಷ ಬಸವರಾಜ ಮೈನಾಳಕರ್, ಮಹೇಶ್ ವಠಾರ, ಸೂರ್ಯಕಾಂತ ಕೊಂಕನಳ್ಳಿ, ನಾಗೇಂದ್ರ ಜೈಗಂಗಾ, ಈರಣ್ಣ ಈಸಬಾ, ದೊಡ್ಡಪ್ಪ ಕಟ್ಟಿಮನಿ, ಕರ್ಣಪ್ಪ ಈಸಬಾ, ಶರಣು ಸಿದ್ರಾಮಗೋಳ, ಬಸವರಾಜ ಜಕಾತಿ, ವೆಂಕಟರಮಣ ಬೇವಿನಗಿಡ, ಶರಣಪ್ಪ ಹೊನ್ನಪೂರ, ಶಿವಶರಣ ಮೇಂಗಾ, ಆಂಜನೇಯ ಜೀವಣಗಿ, ಮಲ್ಲೇಶಿ ಜೀರಕಲ್, ಸೇರಿದಂತೆ ಅನೇಕರು ಇದ್ದರು.
ಸಿಪಿಐ ಚಂದ್ರಶೇಖರ ತಿಗಡಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿದ್ದರು‌.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!