ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲಾವಿದರ ಒಕ್ಕೂಟದ ಸಭೆ

ಬಾಗಲಕೋಟೆ : ಗುರುವಾರ ದಿ. 16 ರಂದು ಗದ್ದನಕೇರಿ ಲಡ್ಡು ಮುತ್ಯಾನ ದೇವಸ್ಥಾನದಲ್ಲಿ ಮುಂಜಾನೆ 10-30ಕ್ಕೆ ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ ಎಂದು ಒಕ್ಕೂಟದ ಮುಖಂಡ ಶಂಕರಪ್ಪ ತಂಬಾಕದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಶರಣಬಸವಶಾಸ್ತ್ರಿಗಳು ವಹಿಸುವರು.
ಈ ಸಭೆಯಲ್ಲಿ ಜಿಲ್ಲೆಯ ಕಲಾವಿದರ ವಲಯದಲ್ಲಿರುವ ಹಲವಾರು ಸಮಸ್ಯೆಗಳನ್ನು ಚರ್ಚಿಸಲಾಗುವುದು. ಕಲಾವಿದರು ನೀಡಿದ ಅಹವಾಲುಗಳನ್ನು ಸ್ವೀಕರಿಸಿ ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಡಲಾಗುವುದು. ಜಿಲ್ಲೆಯ ಕಲಾವಿದರು ಸರಿಯಾದ ಸಮಯಕ್ಕೆ ಆಗಮಿಸಿ ತಮ್ಮ ಸಲಹೆ ಮಾರ್ಗದರ್ಶನಗಳನ್ನ ನೀಡಬೇಕು, ಅಲ್ಲದೆ ಕಲಾಕ್ಷೇತ್ರಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಒಕ್ಕೂಟದಲ್ಲಿ ದಾಖಲಿಸಬೇಕೆಂದು ಅವರು ತಿಳಿಸಿದ್ದಾರೆ.
ಈ ಸಂದರ್ಭಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪವಿತ್ರ ಜಕ್ಕಪ್ಪನವರ್, ಚಿನ್ನಪ್ಪ ಗೌಡ ಜಲಗೇರಿ, ಈಶ್ವರಪ್ಪ ಹೊರಟ್ಟಿ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!