ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆ ನಿಮಿತ್ತ ಪಟ್ಟಣದಲ್ಲಿ ಹಡಪದ ಸಮಾಜದ ಮುಖಂಡರಿಂದ ಸಂಭ್ರಮ

ಕಲಬುರಗಿ/ ಚಿತ್ತಾಪುರ; ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕರ್ನಾಟಕ ಹಡಪದ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹಡಪದ ಸಮಾಜದ ನೇತೃತ್ವದಲ್ಲಿ ಮುಖಂಡರು ಲಾಡ್ಜಿಂಗ್ ಕ್ರಾಸ್ ಹತ್ತಿರ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ನಂತರ ತಾಲೂಕು ಅಧ್ಯಕ್ಷ ರಮೇಶ್ ಹಡಪದ ಕೊಲ್ಲೂರು ಮಾತನಾಡಿ, ಹಡಪದ ಸಮಾಜದ ಬಹುದಿನಗಳ ಬೇಡಿಕೆಯಾಗಿದ್ದ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿ ನಮ್ಮ ಸಮಾಜಕ್ಕೆ ನ್ಯಾಯ ಕಲ್ಪಿಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರಿಗೆ ಅಭಿನಂದನೆಗಳು ಸಲ್ಲಿಸಿದರು.
ಮುಖಂಡರಾದ ಸಂಜಯ ಬುಳಕರ್, ಸಂತೋಷ ಪೂಜಾರಿ, ಅಶೋಕ ಹಡಪದ ಚಿತ್ತಾಪುರ, ಅಶೋಕ ಚಾರೆ ವಾಡಿ, ಪಂಡಿತ್ ಚಾರೆ, ಮುರುಳಿ ಹಡಪದ ಚಿತ್ತಾಪುರ, ಸೋಮನಾಥ ಹಡಪದ, ಕಾಶಿನಾಥ ಹಡಪದ, ಸಿದ್ದು ಹಡಪದ ಭೀಮನಳ್ಳಿ, ವಿಶ್ವನಾಥ ಹಡಪದ, ಸಂದೇಶ ಹಡಪದ, ಚಂದ್ರಶೇಖರ ಹಡಪದ, ಮಹೇಶ್ ಹಡಪದ, ಕಲ್ಯಾಣಿ ಹಡಪದ, ಗಣಪತಿ ಹಡಪದ ಗುಂಡಗುರ್ತಿ ಸೇರಿದಂತೆ ಇತರರು ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!