ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಚ್ಛತೆ ಹಾಗೂ ಶಿಕ್ಷಣವೇ ದೇವರು – ರಂಗಾಪುರ ಶ್ರೀ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ರಂಗನಾಥಪುರ ಗ್ರಾಮದ ಶ್ರೀ ಎಲ್ಲಮ್ಮ ದೇವಿ ದೇವಾಲಯದ 12ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕೆರಗೋಡಿ ರಂಗಾಪುರ ಸುಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಗುರುಪರದೇಶಿ ಕೇಂದ್ರ ಮಹಾಸ್ವಾಮೀಜಿಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಹಾಗೂ ಸ್ವಚ್ಛತೆ ಕಾಪಾಡುವುದೇ ನಿಜವಾದ ದೇವರ ಕಾರ್ಯ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬಳಸಬೇಕು ಧಾರ್ಮಿಕ ಭಾವನೆಗಳಿಗೆ ಬೆಲೆ ಕೊಡಬೇಕೆಂದು ತಿಳಿಸಿದರು. ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷರಾದ ಕರಡಿ ದೇವರಾಜು ಈ ಗ್ರಾಮಕ್ಕೆ ನೀಡುತ್ತಿರುವ ಸಹಕಾರ ಹಾಗೂ ಈ ಒಗ್ಗಟ್ಟು ಹೀಗೆ ಇರಲಿ ಎಂದು ಹಾಗೂ ದೇವರಾಜು ತಾಲೂಕು ಮಟ್ಟದ ನಾಯಕನಾಗಿ ಬೆಳೆದಿದ್ದು ಇವರಿಗೆ ದೇವರು ಸಕಲವನ್ನು ಕರುಣಿಸಲೆಂದು ಹಾರೈಸಿದರು

ಮಾಜಿ ಸಚಿವರಾದ ಬಿ ಸಿ ನಾಗೇಶ್ ಮಾತನಾಡಿ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುತ್ತಿರುವುದು ಒಂದು ಉತ್ತಮ ಬೆಳವಣಿಗೆ ಹೀಗೆ ಮುಂದುವರೆಸಬೇಕೆಂದು ತಿಳಿಸಿದರು.

ವೈದ್ಯರಾದ ಡಾ. ಶ್ರೀಧರ್ ಮಾತನಾಡಿ ಇಂದಿನ ಸನ್ನಿವೇಶದಲ್ಲಿ ಆರೋಗ್ಯ ತುಂಬಾ ಮುಖ್ಯವಾಗಿದ್ದು ಸೂಕ್ತ ವೈದ್ಯಕೀಯ ಸಲಹೆಯೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.

ಕೇಂದ್ರ ಸಚಿವರಾದ ವಿ ಸೋಮಣ್ಣ ಸಮಾರಂಭದಲ್ಲಿ ಭಾಗವಹಿಸಬೇಕಾಗಿತ್ತು ಆದರೆ ಇಲಾಖೆಯ ತುರ್ತು ಕಾರ್ಯ ನಿಮಿತ್ತ ದೆಹಲಿಗೆ ಹೋಗಿರುವುದರಿಂದ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಿಲ್ಲವೆಂದು ವಿಡಿಯೋ ಸಂದೇಶದ ಮೂಲಕ ಶುಭ ಹಾರೈಸಿದರು.

ಚಿತ್ರನಟ ದೊಡ್ಡಣ್ಣ ಕೂಡ ಅನಾರೋಗ್ಯದ ಕಾರಣ ಸಮಾರಂಭದಲ್ಲಿ ಹಾಜರಾಗಲು ಸಾಧ್ಯವಿಲ್ಲದೆ ಇರುವುದರಿಂದ ವಿಡಿಯೋ ಸಂದೇಶದ ಮೂಲಕ ಶುಭ ಹಾರೈಸಿ ಮುಂದಿನ ದಿನಗಳಲ್ಲಿ ದೇವಾಲಯಕ್ಕೆ ಬಂದು ದೇವಿಯ ಆಶೀರ್ವಾದ ಪಡೆಯುತ್ತೇನೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಮಾಜ ಸೇವಕ ಬೋರ್ ವೆಲ್ ಮಧುಸೂದನ್, ತಿಪಟೂರು ನಗರಸಭಾ ಸದಸ್ಯರಾದ ಶಶಿಕಿರಣ್ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಕೆ ಆರ್ ದೇವರಾಜು, ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ನ್ಯಾಕೇನಹಳ್ಳಿ ವೀರಣ್ಣ, ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾದ ಕೆ ಜಿ ರಂಗಸ್ವಾಮಿ, ದೇವಾಲಯದ ಕನ್ವೀನರ್ ಶ್ರೀನಿವಾಸ್, ಗ್ರಾಮ ಪಂಚಾಯತಿ ಸದಸ್ಯರಗಳು ಸೇರಿದಂತೆ ಅಧಿಕ ಸಂಖ್ಯೆಯ ಭಕ್ತಾದಿಗಳು ಹಾಜರಿದ್ದರು. ಪ್ರಾಂಶುಪಾಲರಾದ ರೇಣುಕಯ್ಯ ಕಾರ್ಯಕ್ರಮ ನಿರೂಪಿಸಿದರು.

ವರದಿ ಮನು ಸಿಡ್ಲೆಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!