ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಧಾರ್ಮಿಕ ಕಾರ್ಯಗಳಲ್ಲಿ ಮಹತ್ವದ ಪಾತ್ರ : ಶಿವಸಿದ್ದೇಶ್ವರ ಸ್ವಾಮೀಜಿ

ಬಳ್ಳಾರಿ / ಕಂಪ್ಲಿ : ವಿಜಯನಗರದ ಅರಸರು ಸದಾ ಪೂಜಿಸುತ್ತಿದ್ದ ಎಮ್ಮಿಗನೂರಿನ ಹಂಪಿ ಸಾವಿರ ದೇವರ ಮಹಾಂತರ ಮಠವು ಸಮಾಜೋದ್ಧಾರ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪರಮಪೂಜ್ಯ ಶಿವಸಿದ್ದೇಶ್ವರ ಮಹಾ ಸ್ವಾಮೀಜಿ ತಿಳಿಸಿದರು.
ಅವರು ಅನ್ಯ ಕಾರ್ಯನಿಮಿತ್ತ ಬೇರೆ ಊರಿಗೆ ತೆರಳುವ ಮುನ್ನ ಎಮ್ಮಿಗನೂರು ಗ್ರಾಮದ ಹಂಪಿ ಸಾವಿರ ದೇವರು ಮಹಾಂತರ ಮಠಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿ ಮಠದ ಹಿರಿಯ ಲಿಂಗೈಕ್ಯ ಸಿದ್ಧಲಿಂಗ ಮಹಾಂತ ಶಿವಾಚಾರ್ಯ ಕತೃ ಗದ್ದುಗೆಗೆ ಪೂಜೆಯನ್ನು ಸಲ್ಲಿಸಿ ಆಶೀರ್ವಾದ ಪಡೆದ ನಂತರ ಸಕಲ ಸದ್ಭಕ್ತರಿಗೆ ಶುಭ ಆಶೀರ್ವಚನ ನೀಡಿದರು.
ಎಮ್ಮಿಗನೂರಿನ ಮಠಕ್ಕೆ ಚಾರಿತ್ರಿಕ, ಧಾರ್ಮಿಕ, ಸಾಮಾಜಿಕ ಹಿನ್ನೆಲೆಯಿದೆ. ಇಂತ ಪವಿತ್ರ ಮಠಕ್ಕೆ ಶ್ರೀಗಳಾಗಿರುವ ವಾಮದೇವ ಮಹಾಂತ ಶಿವಾಚಾರ್ಯರು ಶ್ರೀಮಠದ ಪೀಠಾಧಿಪತಿಗಳಾಗಿರುವುದು ಇಲ್ಲಿನ ಭಕ್ತರ ಸುದೈವ. ಹೀಗಾಗಿ ಶ್ರೀಮಠ ಬಹುಬೇಗ ಜನ ಮಾನಸದಲ್ಲಿ ಉಳಿದಿದೆ ಎಂದು ಶ್ಲಾಘಿಸಿದರು. ಎಮ್ಮಿಗನೂರು ಹಂಪಿ ಸಾವಿರ ದೇವರು ಮಠದಲ್ಲಿ ಬೆಳೆದ ಮಕ್ಕಳು ರಾಜ್ಯ, ಅಂತರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ತಾನಸೇನ್ ಖ್ಯಾತಿಯ ಜ್ಞಾನೇಶ, ರಾಜು ಎಮ್ಮಿಗನೂರು ಇತರರು ಬಹಳ ದೊಡ್ಡ ಹೆಸರನ್ನು ಮಾಡಿದ್ದಾರೆ. ಅದೇ ರೀತಿ ಸಾಮಾಜಿಕ ಸೇವೆಯಲ್ಲಿಯೂ ಸಾಧನೆ ಮಾಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿಯೂ ಮಹತ್ವದ ಕೆಲಸ ಮಾಡಿದ ಭಕ್ತರು ಇಲ್ಲಿದ್ದಾರೆ. ಮಠದಲ್ಲಿ ಪ್ರತಿವರ್ಷವೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವ.
ಸಾಧು, ಸಂತರು, ಶರಣರ ಪುರಾಣಗಳನ್ನು ಏರ್ಪಡಿಸುವ ಮೂಲಕ ಭಕ್ತರ ಮನದಲ್ಲಿ ವಾಮದೇವ ಶ್ರೀಗಳು ತುಂಬಿ ಸಮಾಜದ ಮುಖ್ಯವಾಹಿನಿಗೆ ತಂದಿದ್ದಾರೆ ಎಂದರು. ಶ್ರೀಮಠದ ಪೀಠಾಧಿಪತಿಗಳಾದ ವಾಮದೇವ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಸಿದ್ಧಗಂಗಾ ಮಠದ ಶ್ರೀಗಳು ಇಡೀ ದೇಶದಲ್ಲಿ ಹೆಸರು ಮಾಡಿದವರು. ನಡೆದಾಡುವ ದೇವರೆಂದು ಪ್ರಖ್ಯಾತಿಯನ್ನು ಗಳಿಸಿದವರು. ಕೋಟ್ಯಾಂತರ ಭಕ್ತರ ಮನೆ ಮನಗಳಲ್ಲಿ ನೆಲೆಯಾಗಿ ನಿಂತವರು. ತಪೋನಿಷ್ಠೆಯುಳ್ಳವರು. ಶರಣರ ಮಾರ್ಗದಲ್ಲಿ ಬಹುದೊಡ್ಡ ಹೆಸರು ಮಾಡಿದ ಸಿದ್ಧಗಂಗಾ ಶಿವಕುಮಾರ ಶ್ರೀಗಳ ಬದುಕು ನಮಗೆಲ್ಲಾ ಮಾದರಿ ಇಂದಿನ ಶಿವಸಿದ್ದೇಶ್ವರ ಸ್ವಾಮೀಜಿ ನಮ್ಮ ಮಠಕ್ಕೆ ಅನಿರೀಕ್ಷಿತವಾಗಿ ಆಗಮಿಸಿ ಹರಸಿದ್ದು ನಮ್ಮ ಗೌರವ ಹೆಚ್ಚಿಸಿತು ಎಂದರು.
ಈ ಸಂದರ್ಭದಲ್ಲಿ ಸಿರುಗುಪ್ಪದ ಬಸವಭೂಷಣ ಶ್ರೀಗಳು, ಶಿವ ಬಸವ ಸ್ವಾಮೀಜಿ, ಮುಖಂಡರಾದ ಬಿ.ಸದಾಶಿವಪ್ಪ, ಬೇರ್ಗಿ ಮಹೇಶಹೌಡ, ಬಜಾರು ಬಸವನಗೌಡ, ಎಳ್ಳಾರ್ತಿ ರಾಘವೇಂದ್ರ ರೆಡ್ಡಿ, ಕೆ.ಎಂ.ಘನಮಠದಯ್ಯ ಸ್ವಾಮಿ, ಸೂಗೂರು ಎಸ್.ಎಂ.ಉಮೇಶ ಸ್ವಾಮಿ, ಸಜ್ಜನ ಬಸವರಾಜ, ಬಸವನಗೌಡ, ಜಡೇಶ್ ಘಂಟೆ, ವಿ.ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!