ತೀರ್ಥಹಳ್ಳಿ ವೈದ್ಯರ ಅಸೋಸಿಯೇಷನ್ ನಿಂದ 25 ನೇ ವರ್ಷದ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು ಅದರಲ್ಲಿ ಮುಖ್ಯವಾಗಿ ರಕ್ತದಾನ, ಆಶಾ ಕಾರ್ಯಕರ್ತೆಯರಿಗೆ, ಪೊಲೀಸ್ ಇಲಾಖೆಯವರಿಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಗೆ ನುರಿತ ವೈದ್ಯರಿಂದ ತುರ್ತು ಪರಿಸ್ಥಿತಿಯಲ್ಲಿ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ತರಬೇತಿ ನೀಡಲಾಯಿತು. ಹಾಗೂ ಮುಖ್ಯ ಅತಿಥಿಗಳಾಗಿ ಹೃದ್ರೋಗ ತಜ್ಞ ಹಾಗೂ ಹಾಲಿ ಲೋಕಸಭಾ ಸದಸ್ಯ ಡಾ. ಮಂಜುನಾಥ್ ಹಾಗೂ ನುರಿತ ನ್ಯುರೋಲಜಿ ತಜ್ಞಡಾ.ಜಿ ಕೆ ವೆಂಕಟೇಶ್ ರವರು ಭಾಗವಹಿಸಿದರು. ಡಾ. ಮಂಜುನಾಥ್ ರವರು ಮಾತನಾಡಿ ಆಧುನಿಕ ಜೀವನ ಶೈಲಿ ಹಾಗೂ ಹೃದಯ ಕುರಿತು ಉಪನ್ಯಾಸ ನೀಡಿದರು. ಡಾ. ಮಂಜುನಾಥ್ ಮಾತನಾಡಿ ನಮ್ಮ ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ಹೃದಯವನ್ನು ಹೇಗೆ ಆರೋಗ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಸವಿಸ್ತಾರವಾಗಿ ಜನರಿಗೆ ಮನ ಮುಟ್ಟುವಂತೆ ಮಾತನಾಡಿದರು. ಡಾ. ಜಿ ಕೆ ವೆಂಕಟೇಶ್ ಮಾತನಾಡಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಸಲಹೆ ನೀಡಿದರು ಹಾಗೂ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ಹಾಗೂ ಡಾ. ಮಂಜುನಾಥ್ ಗೌಡರವರು ಮಾತನಾಡಿ ತೀರ್ಥಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ವೈದ್ಯರ ಸೇವೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.
ವರದಿ : ಪ್ರಸಾದ್ ಹೆಚ್. ಬಿ., ತೀರ್ಥಹಳ್ಳಿ



















