ಬಾಗಲಕೋಟೆ: ಜಿಲ್ಲಾ ಬಾಲ ಭವನ , ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲ ಭವನ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನೆಡೆದ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ನಡೆದ ಸೃಜನಾತ್ಮಕ ಕಲೆ, ಚಿತ್ರಕಲೆ, ಜೆಡೆ ಮಣ್ಣಿನ ಕಲೆ, ಕರಕುಶಲ ಕಲೆ, ಸ್ಪರ್ಧೆಯಲ್ಲಿ ಭಾಗವಹಿಸಿದ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಸರಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಕು. ಮಹೇಶ್ ಎಚ್ ಕರಡಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾನೆ. ಮುಂದೆ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಕಾರ್ಯಕ್ರಮಕ್ಕೆ ಅರ್ಹತೆ ಪಡೆದಿದ್ದಾನೆ.
ಆಯ್ಕೆಗೊಂಡ ವಿದ್ಯಾರ್ಥಿ ಹಾಗೂ ಮಾರ್ಗದರ್ಶನ ನೀಡಿದ ಚಿತ್ರಕಲಾ ಶಿಕ್ಷಕ ಎಸ್. ಎಸ್. ಗೌಡರ ಗುರುಗಳನ್ನು ಶಾಲೆಯ ಗುರು ಬಳಗ ಎಸ್ ಡಿ ಎಂ ಸಿ ಅಧ್ಯಕ್ಷರು , ಸರ್ವ ಸದಸ್ಯರು, ಪತ್ರಕರ್ತ ವೀರೇಶ್ ಶಿಂಪಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ



















