ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುರಸಗುಂಡಗಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಪಿಡಿಒ ಅಮಾನತು ಮಾಡಿ

ಯಾದಗಿರಿ: ಶಹಾಪುರ ತಾಲೂಕಿನ ಹುರಸಗುಂಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಯಂಕಮ್ಮ ಗಂಡ ಹನುಮಂತರಾಯ ಇವರು ಹುರಸಗುಂಡಗಿ ಗ್ರಾಮ ಪಂಚಾಯಿತಿ ಇವರ ಮನೆ ಆಸ್ತಿ ಅಂತೆಯೇ ತಿಳಿದುಕೊಂಡು ತಮ್ಮ ಮನಸಿಗೆ ಬಂದ ಹಾಗೆ ಪಂಚಾಯಿತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೆಯೇ ಹುರಸಗುಂಡಗಿ ಪಂಚಾಯಿತಿಯಲ್ಲಿ. ಅಧ್ಯಕ್ಷ ಮತ್ತು ಪಿಡಿಒ ಅವರದೇ ದರ್ಬಾರು ಮತ್ತು ಪಿಡಿಒ ಇಬ್ಬರು ಸೇರಿಕೊಂಡು 15ನೇ ಹಣಕಾಸು ಯೋಜನ ಕಾಮಗಾರಿಗಳನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇವರನ್ನು ಕೂಡಲೇ ಸದಸ್ಯತ್ವ ರದ್ದು ಮಾಡಿ ಹಾಗೇ ಪಂಚಾಯಿತಿಯ ಪಿಡಿಒ ಗೇ ಸೇವೆಯಿಂದ ಅಮಾನತು ಮಾಡಿ ಎಂದು ಒತ್ತಾಯಿಸಿದರು ನಿನ್ನೆ ತಾಲೂಕು ಪಂಚಾಯತ್ ಕಾರ್ಯಾಲಯಕ್ಕೆ ಬೀಗ ಜಡೆದು ಪ್ರತಿಭಟನೆಗೆ ಮುಂದಾದಾಗ ಪಂಚಾಯಿತಿಯ ಅಧಿಕಾರಿಗಳು ಬಂದು ಬೇಡಾ ಸರ್ ನಾನು ಮೇಲಧಿಕಾರಿಗಳಿಗೆ ಗಮನಕ್ಕೆ ತಂದು ಎರಡು ಮೂರು ದಿನಗಳು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಇದೆ ಸಂದರ್ಭದಲ್ಲಿ ಪ್ರತಿಭಟನಾಕಾರರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅಧ್ಯಕ್ಷ ಹಾಗೂ ಪಿಡಿಒ ಅಮಾನತು ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ಜಿಲ್ಲಾ ಸಂಚಾಲಕರಾದ ಶಿವಪುತ್ರ ಜವಳಿ, ಮಲ್ಲಿಕಾರ್ಜುನ ಹೊಸಮನಿ, ಶಹಾಪುರ ತಾಲೂಕಾ ಸಂಚಾಲಕರಾದ ಮರೆಪ್ಪ ಕ್ರಾಂತಿ, ಸಂತೋಷ ಗುಂಡಹಳ್ಳಿ ಶರಬಣ್ಣ ದೊರನಹಳ್ಳಿ, ವಾಸು ಕೋಗಿಲಕರ್, ಶ್ರೀಮಂತ ಸಿಂಗನಹಳ್ಳಿ, ಮಲ್ಲಪ್ಪ ಅನ್ವರ್, ಸಾಬಣ್ಣ ಬಳ್ಳಕ್ಕಿ, ಹೊನ್ನಪ್ಪ ತಾಳಿಗೇರಿ,ಹಣಮಂತ ಪೂಜಾರಿ ರಾಜು ಕುದರಿ, ರವಿ ಹಳಿಸಗರ್, ಭಾಗಪ್ಪ ರಸ್ತಾಪುರ, ಮರೆಪ್ಪ , ಹಣಮಂತ ಹುಲಸುರ, ಬಸಲಿಂಗಪ್ಪ ಮತ್ತು ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ