
ಗುರುಮಠಕಲ್: ನ. 17 ಲಯನ್ಸ್ ಕ್ಲಬ್ ಆಫ್ ಗುರುಮಠಕಲ್ ಸೇವಾ ಸದನ ವತಿಯಿಂದ ಗುರುಮಠಕಲ್ ಮತಕ್ಷೇತ್ರದ ಶಾಸಕರಾದ ಶ್ರೀ ಶರಣಗೌಡ ಕಂದಕೂರು ಅವರ ಜನ್ಮದಿನದ ಪ್ರಯುಕ್ತ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯ ವೈದ್ಯರಾದ ಡಾ.ಪವನ್ ಕುಮಾರ್ ಅವರ ನೇತೃತ್ವದಲ್ಲಿ ಇಂದು ದಿನಾಂಕ 17-11-2025, ಸೋಮವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ ಜರುಗಿತು.
ಕಾರ್ಯಕ್ರಮದಲ್ಲಿ ರೋಗಿಗಳಿಗೆ ಉಚಿತ ಬಿಪಿ ಶುಗರ್ ಸೇರಿದಂತೆ ಆರೋಗ್ಯ ತಪಾಸಣೆ, ಚಿಕಿತ್ಸೆ ಹಾಗೂ ಸಲಹೆಗಳನ್ನು ನೀಡಲಾಯಿತು. ತಪಾಸಣೆಯಲ್ಲಿ ಸುಮಾರು 75ಕ್ಕೂ ಅಧಿಕ ಜನ ಭಾಗವಹಿಸಿದ್ದು, ತಪಾಸಣೆಗೆ ಒಳಪಟ್ಟ ಎಲ್ಲರಿಗೂ ಹಣ್ಣುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಶರಣು ಅವಂಟಿ, ವಿನಯಶೇಖರ ಹಿರೇಮಠ, ಶ್ರೀನಿವಾಸ ರೆಡ್ಡಿ, ರಾಮಕೃಷ್ಣ ಯಾದವ್, ಪ್ರಕಾಶ ಗುಮಡಲ್ ಚಂದ್ರಶೇಖರ ಮಂಚಾಲ ಹಾಗೂ ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದರು.
ವರದಿ: ಜಗದೀಶ್ ಕುಮಾರ್ ಭೂಮಾ



















