ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾಲುಮತ ಸಮಾಜದಿಂದ ಭಕ್ತ ಕನಕದಾಸರ ಭವ್ಯ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಹಾಲುಮತ ಸಮಾಜದಿಂದ ಭಕ್ತ ಕನಕದಾಸರ 535ನೇ ಜಯಂತ್ಯೋತ್ಸವ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿಯ ಸಾಂಗತ್ರಯ ಪಾಠಶಾಲೆಯಿಂದ ಆರಂಭಗೊಂಡು ಭವ್ಯ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಅದ್ದಪ್ಪ ಗುಡಿವರೆಗೆ ತೆರಳಿ, ತದನಂತರ ಬೀರಲಿಂಗೇಶ್ವರ ಗುಡಿಹತ್ತಿರ ಸಮಾವೇಶಗೊಂಡಿತು.

ತಾಷಾರಾಂಡೋಲ್, ಡೊಳ್ಳು ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ತಂಡದ ಡೊಳ್ಳು ಪ್ರದರ್ಶನ ಮೆರವಣಿಗೆ ಮೆರಗು ನೀಡುವ ಜೊತೆಗೆ ಜನರ ಆಕರ್ಷಣೆಗೆ ಪಾತ್ರರಾದರು.

ಮೆರವಣಿಗೆಯದ್ದಕ್ಕೂ ಯುವಕರು ಕುಣಿದು ಸಂಭ್ರಮಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಕ್ತ ಕನಕದಾಸರ ಜಯಂತಿ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಜೆ. ಎನ್. ಗಣೇಶ, ಹಾಲುಮತ ಸಮಾಜದ ನಗರ ಘಟಕ ಅಧ್ಯಕ್ಷ ಕೆ.ವಸಂತಕುಮಾರ, ಉಪಾಧ್ಯಕ್ಷ ಕುರಿ ಸಿದ್ದಪ್ಪ, ಖಜಾಂಚಿ ಬಿ.ಶೇಖರ, ಮುಖಂಡರಾದ ಕೆ.ಯಮನೂರಪ್ಪ, ಕೆ.ಹರಿನಾಥ, ಕುರಿ ಹುಸೇನಪ್ಪ, ನೆಲ್ಲೂಡಿ ವಿರೇಶಪ್ಪ ಶಿವಪುರ ರಮೇಶ ಮುತ್ತಣ ಬೀರಲಿಂಗ ವಿರುಪಣ್ಣ ಬಿ. ಲಕ್ಷ್ಮಣ, ಕುರಿ ಮಂಜುನಾಥ, ಬಳ್ಳಾಪುರ ಲಿಂಗಪ್ಪ, ಕೋಟ್ಟಾಲ್‌ಸುಧಾ, ಬಿಂಗಿ ವೆಂಕಟೇಶ ಕುಮಾರ, ಬಲಕುಂದಿ ರಾಜಶೇಖರ, ಕೆ.ರಂಗಪ್ಪ ಮೈಲಾರಿ ಯಲ್ಲಪ್ಪ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!