ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುವೆಂಪುರವರ ತತ್ವ ಆದರ್ಶಗಳು ತ್ರಿಕಾಲಕ್ಕೂ ಪ್ರಸ್ತುತವಾಗಿವೆ : ಉಪನ್ಯಾಸಕ ಜೀರು ಮಲ್ಲಿಕಾರ್ಜುನ ಅಭಿಪ್ರಾಯ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಾಹಿತ್ಯ ಸಿರಿ ಪ್ರತಿಷ್ಠಾನವು ಗಂಗಾ ಸಂಕೀರ್ಣದಲ್ಲಿ ಹಮ್ಮಿಕೊಂಡ ಕುವೆಂಪು ಸಂಸ್ಮರಣೋತ್ಸವ ನಿಮಿತ್ತ ಭಾನುವಾರ ‘ಕುವೆಂಪು ವಿಚಾರಧಾರೆ’ ಕುರಿತ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಷಾ. ಮಿಯಾಚಂದ್ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಜೀರು ಮಲ್ಲಿಕಾರ್ಜುನ ಉಪನ್ಯಾಸ ನೀಡಿ, ಕುವೆಂಪು ಸಾಹಿತ್ಯದ ತತ್ವ ಆದರ್ಶಗಳು ಸದಾ ಪ್ರಸ್ತುತವಾಗಿರುತ್ತವೆ. ವಿಶ್ವಮಾನವ, ನಿರಂಕುಶಮತಿ, ನಾಡಪ್ರೇಮ, ಕನ್ನಡ ನುಡಿ ಪ್ರೇಮ, ದಾಂಪತ್ಯ, ಪ್ರಕೃತಿ, ಆಧ್ಯಾತ್ಮ, ನಿಸರ್ಗ, ಮೌಢ್ಯವಿರೋಧಿ ಭಾವನೆಗಳನ್ನು ಕುವೆಂಪು ಕವಿತೆಗಳಲ್ಲಿ ಕಾಣಬಹುದಾಗಿದೆ. ಮನುಜಮತ ವಿಶ್ವಪಥ, ಸರ್ವೋದಯ, ಸಮನ್ವಯತೆ, ಪೂರ್ಣತೆ, ನಿರಂಕುಶಮತಿ ಮೊದಲಾದ ತತ್ವ ಆದರ್ಶಗಳು ತ್ರಿಕಾಲವು ಪ್ರಸ್ತುತವಾಗಿರುತ್ತದೆ. ಕರ್ನಾಟಕದ ಏಕೀಕರಣಕ್ಕಾಗಿ ಕನ್ನಡಿಗರ ಸಂಘಟನೆಯಲ್ಲಿ ಕುವೆಂಪು ಸಾಹಿತ್ಯ ಮಹತ್ವದಪಾತ್ರವಹಿಸಿತ್ತು ಎಂದರು.

ನಿವೃತ್ತ ಮುಖ್ಯಶಿಕ್ಷಕ ಕೆ.ಚಂದ್ರಶೇಖರ್ ಅಧ್ಯಕ್ಷತೆವಹಿಸಿ ಮಾತನಾಡಿ, ಕುವೆಂಪು ಕವಿತೆಗಳು ಮನುಜರಲ್ಲಿ ಸಾಮರಸ್ಯ, ಸಹಿಷ್ಣುತೆ, ಸಹೋದರತೆ ಮನೋಭಾವನೆಗಳನ್ನು ಬೆಳಸಿಕೊಳ್ಳುವಂತೆ ಪ್ರೇರೇಪಿಸುತ್ತವೆ ಎಂದರು.
ಶಿಕ್ಷಕಿ ವೀರಮ್ಮನಾಗರಾಜ, ಉಪನ್ಯಾಸಕ ಜೀರು ಮಲ್ಲಿಕಾರ್ಜುನ ಕುವೆಂಪು ಗೀತೆಗಳನ್ನು ಹಾಡಿದರು.

ಈಚೆಗೆ ನಿಧನರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಳ ಆತ್ಮಕ್ಕೆ ಶಾಂತಿಕೋರಿ ಮೌನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪೋಡಿ ನಾರಾಯಣಪ್ಪ, ಎಲಿಗಾರ ವೆಂಕಟರೆಡ್ಡಿ, ಪ್ರತಿಷ್ಠಾನದ ಪದಾಧಿಕಾರಿಗಳಾದ ಎಸ್.ಡಿ.ಬಸವರಾಜ, ಬಂಗಿ ದೊಡ್ಡ ಮಂಜುನಾಥ, ಎಸ್.ಶಾಮಸುಂದರರಾವ್, ಅಂಬಿಗರ ಮಂಜುನಾಥ, ಚಂದ್ರಯ್ಯ ಸೊಪ್ಪಿಮಠ, ವೀರಮ್ಮನಾಗರಾಜ, ಎಚ್.ನಾಗರಾಜ, ಮುದುಕಪ್ಪ ನೆಲಜೇರಿ, ಯು.ಎಂ.ವಿದ್ಯಾಶಂಕರ್, ಕೆ.ಯಂಕಾರೆಡ್ಡಿ, ಗಂಡಿ ಗಣೇಶ, ರಾಮಚಂದ್ರ ಚಿತ್ರಗಾರ, ಪೀರಸಾಬ್ ಹಂಚಿನಾಳ, ಗುರುಬಸಮ್ಮ ಸೇರಿ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!