
ಹುನಗುಂದ: ತಾಲ್ಲೂಕಿನ ನಾಗೂರು ಗ್ರಾಮದ ಚನ್ನಮ್ಮ ವೃತ್ತದ ಹತ್ತಿರವಿರುವ ಅಭಿನವ ಶ್ರೀ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ ಸಮಾರಂಭ ನ. 21 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ನೂತನ ಅಭಿನವ ಶ್ರೀ ಸಹಕಾರಿ ಸಂಘದ ಕಚೇರಿಯನ್ನು ಹಾಲಿಕೆರೆ- ಗಂಜಿಹಾಳದ ಜಗದ್ಗುರು ಮುಪ್ಪಿನ ಬಸವಲಿಂಗ ಸ್ವಾಮೀಜಿ ಉದ್ಘಾಟಿಸುವರು. ಅಮೀನಗಡ- ಯರಿಗೋನಾಳ ಪ್ರಭುಶಂಕರೇಶ್ವರ ಮಠದ ಶಂಕರರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುವರು.
ಜಿಲ್ಲಾ ಸಹಕಾರಿ ಸಂಘದ ಉಪನಿಬಂಧಕ ದಾನಯ್ಯ ಹಿರೇಮಠ ಅಧ್ಯಕ್ಷತೆ ವಹಿಸುವರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಮಹದೇವ ಕಂಬಾರ ಮುಖ್ಯ ಅತಿಥಿಯಾಗಿ ಆಗಮಿಸುವರು. ಸಹಕಾರಿ ಅಭಿವೃದ್ಧಿ ಅಧಿಕಾರಿ ಎಸ್. ಆರ್. ಬಾಡಗಿ, ಹುನಗುಂದ ಬಿಡಿಸಿಸಿ ಬ್ಯಾಂಕ ಹಿರಿಯ ಶಾಖಾ ವ್ಯವಸ್ಥಾಪಕ ಬಿ.ಎಸ್. ಪಾಟೀಲ, ಸಹಕಾರಿ ಹಿರಿಯ ನಿರೀಕ್ಷಕ ಆರ್.ಎನ್.ಗಡ್ಡಿ ಅತಿಥಿಗಳಾಗಿ ಆಗಮಿಸುವರು. ಗ್ರಾಮದ ಗುರು ಹಿರಿಯರು ಹಾಗೂ ಆಡಳಿತ ಮಂಡಳಿ ಸದಸ್ಯರು ಭಾಗವಹಿಸುವರು ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಶಿವಕುಮಾರ ಕಂದಗಲ್ಲ ಪ್ರಕಟಣೆ ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ




















