ಬೆಳಗಾವಿ /ಬೈಲಹೊಂಗಲ : ಅಂಗರಕ್ಷಕ, ವೀರ ಕೇಸರಿ ಅಮಟೂರು ಬಾಳಪ್ಪ ಅವರ ಶೌರ್ಯ ಸಾಹಸ ನಾಡಪ್ರೇಮ ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿಯಾಗಿದೆ ಆ ವೀರ ಪರಾಕ್ರಮಿಗೆ ಸರಕಾರದಿಂದ ಸಿಗಬೇಕಾದ ಎಲ್ಲಾ ಗೌರವಗಳನ್ನು ಒದಗಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಶಾಸಕ ಮಹಂತೇಶ್ ಕೌಜಲಗಿ ಹೇಳಿದರು. ವೀರ ಕೇಸರಿ ಅಮಟೂರು ಬಾಳಪ್ಪ ಟ್ರಸ್ಟ್ ಕಮಿಟಿ ನೇತೃತ್ವದಲ್ಲಿ ಗುರುವಾರ ನಡೆದ ವೀರ ಕೇಸರಿ ಅಮಟೂರ ಬಾಳಪ್ಪ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಕಿತ್ತೂರ ಶಾಸಕ ಬಾಬಾ ಸಾಹೇಬ್ ಪಾಟೀಲ ಬಾಳಪ್ಪನವರ ಚಿತ್ರ ಮೆರವಣಿಗೆಗೆ ಪೂಜೆ ಚಾಲನೆ ನೀಡಿ ವೀರ ಕೇಸರಿ ಅಮಟೂರ ಬಾಳಪ್ಪನವರ ಪುಣ್ಯ ಸ್ಮರಣೆಯ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕ ಕಂದಾಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕಿನ ಕಂದಾಯ ನಿರೀಕ್ಷಕ ಬಿ. ಆರ್. ಬೋರಗಲ್ಲ ಎಲ್ಲಾ ಕಿರಿಯ ಅಧಿಕಾರಿಗಳ ಒಳಗೊಂಡ ಅಧ್ಯಕ್ಷತೆಯ ಸಮ್ಮುಖದಲ್ಲಿ ಬಾಳಪ್ಪನವರ ಉತ್ಸವ ಅದ್ದೂರಿಯಾಗಿ ಜರುಗಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರಾಘವೇಂದ್ರ ಸಂಗಪ್ಪನವರ ತಮ್ಮ ಪಂಚಾಯಿತಿ ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಉತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದರು.
ಇದೇ ಸಂದರ್ಭದಲ್ಲಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಸ್ವಾತಂತ್ರ್ಯ ಸೇನಾನಿ ಗಳ ಉಡುಗೆ ತೊಟ್ಟು ಮಿಂಚಿದರು. ನಯನಗರ ಗ್ರಾಮದ ಸುಖ ದೇವಾನಂದ ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ತಹಸಿಲ್ದಾರ ಎಚ್ ಎನ್ ಶಿರಹಟ್ಟಿ ಶಿಕ್ಷಣ ಅಧಿಕಾರಿ ಎ ಎನ್ ಪ್ಯಾಟಿ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆ ಅಧಿಕಾರಿ ಅರುಣ್ ಕುಮಾರ ಸೇರಿದಂತೆ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
ವರದಿ ಮಂಜು .ಎಂ .ಚಿಕ್ಕಣ್ಣವರ



















