ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇಶದ ಕೃಷಿ ಆಧಾರಿತ ಪ್ರಮುಖ ವಲಯದಲ್ಲಿ ಸಕ್ಕರೆ ಉದ್ಯಮವು ಒಂದು ದೊಡ್ಡ ಉದ್ಯಮವಾಗಿದೆ : ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ದೆಹಲಿ : ಕರ್ನಾಟಕದ ಕಬ್ಬು ಬೆಳೆಯುವ ಕೋಟ್ಯಾಂತರ ರೈತರು ಮತ್ತು ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದಂತೆ ಕಬ್ಬಿನ ರಿಕವರಿ ದರವನ್ನು ಇಳಿಕೆ ಮಾಡುವುದು, ಕಬ್ಬು ಕಟಾವು ಮತ್ತು ಸಾರಿಗೆ ಹೊರತು ಪಡಿಸಿ ಎಫ್. ಆರ್. ಪಿ ದರ ನಿಗದಿ ಮಾಡುವುದು, ಸಕ್ಕರೆಯ ಎಂ.ಎಸ್.ಪಿ ದರವನ್ನು ಹೆಚ್ಚಿಗೆ ಮಾಡುವುದು ಹಾಗೂ ಕರ್ನಾಟಕ ರಾಜ್ಯಕ್ಕೂ ಕೂಡಾ ಎಥೆನಾಲ್ ಮಾರಾಟಕ್ಕೆ ಹೆಚ್ಚಿನ ಅವಕಾಶ ನೀಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ದೇಶದ ಕೃಷಿ ಆಧಾರಿತ ಪ್ರಮುಖ ವಲಯದಲ್ಲಿ ಸಕ್ಕರೆ ಉದ್ಯಮವು ಒಂದು ದೊಡ್ಡ ಉದ್ಯಮವಾಗಿದೆ. ಇದು ಕೋಟ್ಯಾಂತರ ಜನ ರೈತರು, ಕಾರ್ಮಿಕರು, ವ್ಯಾಪಾರಿಗಳು ಮತ್ತು ಉದ್ಯಮಿಗಳು ಪ್ರತ್ಯಕ್ಷ ಮತ್ತು ಅಪ್ರತ್ಯಕ್ಷವಾಗಿ ತಮ್ಮ ಜೀವನೋಪಾಯವನ್ನು ಇದರಲ್ಲಿ ಕಂಡುಕೊಂಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿವೆ, ರೈತರ ಕಠಿಣ ಪರಿಶ್ರಮದ ಫಲವಾಗಿ ದೇಶದ ಸಕ್ಕರೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯವು ಮೂರನೇ ಸ್ಥಾನದಲ್ಲಿದೆ. ದೇಶದ ಒಟ್ಟು ಸಕ್ಕರೆ ಉತ್ಪಾದನೆಯಲ್ಲಿ ಶೇಕಡಾ 16% ರಷ್ಟು ಕರ್ನಾಟಕದಲ್ಲಿಯೇ ಉತ್ಪಾದನೆಯಾಗುತ್ತದೆ. ರಾಜ್ಯದಲ್ಲಿ ಸುಮಾರು 7.5 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತಿದ್ದು ಇದರಿಂದ ಸುಮಾರು 45 ಲಕ್ಷ ಮೆ.ಟನ್‌ಗಳಷ್ಟು ಸಕ್ಕರೆ ಉತ್ಪಾದಿಸಲಾಗುತ್ತದೆ ಹಾಗೂ ಸುಮಾರು 270 ಕೋಟಿ ಲೀಟರ್ ಎಥೆನಾಲ್ ಉತ್ಪಾದಿಸುವುದರ ಜೊತೆಗೆ ಬಹಳ ದೊಡ್ಡ ಪ್ರಮಾಣದಲ್ಲಿ ಬೆಲ್ಲ ಉತ್ಪಾದನೆ ಕೂಡಾ ಮಾಡಲಾಗುತ್ತದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಕಲ್ಯಾಣಕ್ಕೆ ಬದ್ಧವಾಗಿದೆ. ರೈತರ ಕಠಿಣ ಪರಿಶ್ರಮಕ್ಕೆ ತಕ್ಕ ಆದಾಯ ನೀಡುವ ಹಿನ್ನಲೆಯಲ್ಲಿ ಸುಮಾರು 23 ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲಾಗಿದೆ ಜೊತೆಗೆ ಕಬ್ಬಿನ ಬೆಳೆಗೂ ಕೂಡ ಪ್ರತಿ ಟನ್‌ಗೆ 3550 ರೂಪಾಯಿಗಳ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್.ಆರ್.ಪಿ) ಘೋಷಿಸಿರುವುದನ್ನು ಸ್ವಾಗತಿಸಿದರು.

ಪ್ರತಿಬಾರಿ ಎಫ್.ಆರ್.ಪಿ ದರ ನಿಗಧಿ ಮಾಡುವಾಗ ಕಬ್ಬಿನ ರಿಕವರಿಯನ್ನು 9.5% ರಿಂದ 10.25% ಕ್ಕೆ ರಿಕವರಿ ಪ್ರಮಾಣವನ್ನು ಏರಿಕೆ ಮಾಡಲಾಗಿದೆ. ಆದರೆ ಕರ್ನಾಟಕ ರಾಜ್ಯದ ಕಬ್ಬು ಬೆಳೆಯ ಸರಾಸರಿ ರಿಕವರಿ 9.5% ಆಗಿರುವುದರಿಂದ 10.25% ಕ್ಕೆ ಹೆಚ್ಚಿಸಿರುವ ರಿಕವರಿ ಪ್ರಮಾಣವನ್ನು ಮರು ಪರೀಶೀಲಿಸಿ 9.5% ಕ್ಕೆ ರಿಕವರಿ ಪ್ರಮಾಣವನ್ನು ಇಳಿಕೆ ಮಾಡಲು ವಿನಂತಿಸಿದರು.

ಎಫ್.ಆರ್.ಪಿ ದರ ನಿಗಧಿ ಮಾಡುವಾಗ ಕಬ್ಬು ಕಟಾವು ಮತ್ತು ಸಾರಿಗೆ ವೆಚ್ಚ ಸೇರಿಸಿ ದರ ನಿಗದಿ ಮಾಡಿರುವುದು ವೈಜ್ಞಾನಿಕವಲ್ಲದ ಕಾರಣ ಕಬ್ಬು ಕಟಾವು ಮತ್ತು ಸಾರಿಗೆ ಹೊರತು ಪಡಿಸಿ ಎಫ್.ಆರ್.ಪಿ ದರ ನಿಗದಿ ಮಾಡುವುದು ತೀರಾ ಅಗತ್ಯವಾಗಿದೆ ಎಂದು ತಿಳಿಸಿದರು.

2019 ರಿಂದ ಸಕ್ಕರೆಯ ಎಂ.ಎಸ್.ಪಿ ದರ ಪ್ರತಿ ಕೆಜಿಗೆ ಕೇವಲ 31 ರೂಪಾಯಿ ಮಾತ್ರ ಇದ್ದು ಅದನ್ನು ಹೆಚ್ಚಿಗೆ ಮಾಡಿರುವುದಿಲ್ಲ. ಈ ಕಾರಣದಿಂದ ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬಿಗೆ ಹೆಚ್ಚಿನ ದರ ನೀಡಲು ಹಿಂದೆಟು ಹಾಕುತ್ತಿವೆ. ಆದರೆ ಈಗಾಗಲೇ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸುಮಾರು 40 ರೂಪಾಯಿಯಂತೆ ಸಕ್ಕರೆ ಮಾರಾಟವಾಗುವ ಕಾರಣ ಸಕ್ಕರೆಯ ಎಂ.ಎಸ್.ಪಿ ದರವನ್ನು ಹೆಚ್ಚಿಗೆ ಮಾಡುವುದು ಅನಿವಾರ್ಯವಾಗಿದೆ. ಇದರಿಂದ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಉದ್ಯಮಕ್ಕೆ ಹೆಚ್ಚು ಸಹಾಯವಾಗಲಿದೆ. ಕರ್ನಾಟಕ ರಾಜ್ಯದಲ್ಲಿ 270 ಕೋಟಿ ಲೀಟರ್ ಎಥೆನಾಲ ಉತ್ಪಾದನೆ ಆಗುತ್ತಿದ್ದು. ಕರ್ನಾಟಕ ರಾಜ್ಯಕ್ಕೂ ಕೂಡಾ. ಎಥೆನಾಲ ಮಾರಾಟಕ್ಕೆ ಹೆಚ್ಚಿನ ಅವಕಾಶ ನೀಡಬೇಕು ಇದರಿಂದಾಗಿ ಕೋಟ್ಯಾಂತರ ಜನ ರೈತರು, ಕಾರ್ಮಿಕರು, ಉದ್ಯಮಿಗಳು, ವ್ಯಾಪಾರಸ್ಥರು ಇದರ ಲಾಭವನ್ನು ಪಡೆಯಲಿಕ್ಕೆ ಸಾಧ್ಯವಿದೆ. ಹೀಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಬ್ಬು ಬೆಳೆಗಾರರ ಸಹಾಯಕ್ಕೆ ಬರಬೇಕಾಗಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ವರದಿ ಮಂಜು ಎಂ. ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!