ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಕ್ರಮ ಮದ್ಯ ಮಾರಾಟ ಕಡಿವಾಣ ಹಾಕುವಲ್ಲಿ ವಿಫಲ : ಶರಣಬಸಪ್ಪ ದಾನಕೈ(ಅಖಿಲ ಕರ್ನಾಟಕ ಕೊಪ್ಪಳ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯರು.)

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಶಾಲೆಯ ಮುಂಭಾಗದಲ್ಲಿ ಹಾಗೂ ಪಾನ್ ಬೀಡಾ ಅಂಗಡಿ, ಕಿರಾಣಿ ಅಂಗಡಿ, ಗುಡಿಸಲು ಹಾಗೂ ಮನೆಗಳಲ್ಲಿ ಮದ್ಯ ಮಾರಾಟವಾಗುವುದನ್ನು ತಡೆಗಟ್ಟುವಲ್ಲಿ ಮಹಿಳೆಯರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ, ಪೋಲಿಸ್ ಇಲಾಖೆಯವರೊಂದಿಗೆ ನೂರಾರು ಮಹಿಳೆಯರು ಸೇರಿ ಅಕ್ರಮ ಮದ್ಯ ಮಾರಾಟ ಮಾಡುವ ೨೬ ವಿವಿಧ ಅಂಗಡಿಗಳನ್ನು ತೋರಿಸಿದ್ದಾರೆ ,ಪೋಲಿಸ್ ಇಲಾಖೆಯವರು ಪರೀಶಿಲನೆ ವೇಳೆಯಲ್ಲಿ ಮಾರಾಟಗಾರರು ಚಾಣಾಕ್ಷ ಬುದ್ದಿ ಉಪಯೋಗಿಸಿ ಇವರಿಗೆ ಸಿಗಲಾರದಂತೆ ಬೇರೆ ಕಡೆ ಮಾಯ ಮಾಡಿದ್ದಾರೆ, ಆದರೆ ಒಬ್ಬರ ಮನೆಯಲ್ಲಿ ಮಾತ್ರ ಮದ್ಯ ತುಂಬಿರುವ ಬಕೆಟ್ ಸಿಕ್ಕಿರುತ್ತದೆ ಆಗ ಯಲಬುರ್ಗಾ ಪಿ.ಎಸ್.ಐ, ಎಎಸ್.ಐ. ಪೋಲಿಸ್ ಅಧಿಕಾರಿಗಳು ಡಿ. ೫ ರಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಆದರೂ ಈ ಬಗ್ಗೆ ಅಬಕಾರಿ ಇಲಾಖೆಯವರು ಮೌನವಾಗಿದ್ದಾರೆ ಏಕೆ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡುತ್ತಿದೆ, ಅನಧಿಕೃತವಾಗಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಲ್ಲಿ ಅಬಕಾರಿ ಇಲಾಖೆ ವಿಫಲವಾಗಿದೆ ಎಂದು ಅಖಿಲ ಕರ್ನಾಟಕ ಕೊಪ್ಪಳ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶರಣಬಸಪ್ಪ ದಾನಕೈ ಅವರು ಖಂಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿಯ ಚಿಕ್ಕ ಗ್ರಾಮದಲ್ಲಿ ಮಹಿಳೆಯರು ತಮ್ಮ ಕುಟುಂದಲ್ಲಿ ಮನಸ್ಸಿಗೆ ನೆಮ್ಮದಿ ಸಿಗಲಾರದೆ ತೊಂದರೆ ನರಕಯಾತನೆ ಅನುಭವಿಸುತ್ತಿದ್ದಾರೆ, ಕುಡಿತಕ್ಕೆ ದಾಸರಾಗಿ ಮಗ, ಗಂಡ ಸತ್ತ ಈ ಪರಿಸ್ಥಿತಿಯಿಂದ ಅನಾಥರಾಗಿ ಬದುಕು ಸಾಗಿಸುತ್ತಿದ್ದಾರೆ ,ಇಂತಹ ಪರಿಸ್ಥಿತಿಯನ್ನು ಹೊಗಲಾಡಿಸುವಲ್ಲಿ ಅನಧಿಕೃತ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಲ್ಲಿ ಶಾಸಕರು, ಸಂಸದರು, ಸೂಕ್ತ ಕ್ರಮ ತೆಗೆದುಕೊಂಡು ಸುಂದರ ಸಮಾಜ, ಪರಿಸರವನ್ನು ಕಾಪಾಡುವಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ಮದ್ಯ ಪಾನ ಪ್ರಿಯರಿಗೆ ಮದ್ಯವರ್ಜನ ಶಿಬಿರ ಏರ್ಪಡಿಸಿ ಅವರಿಗೆ ತರಬೇತಿ ನೀಡಿ ಪುನರ್ಜನ್ಮ ನೀಡುವ ಕಾರ್ಯ ಮಾಡುತ್ತಾ ಬರುತ್ತಿದೆ ಇದರ ಸದುಪಯೋಗವನ್ನು ಪಡೆದು ಉತ್ತಮ ಜೀವನ ನಿಮ್ಮದಾಗಿಸಿಕೊಳ್ಳುವದಕ್ಕೆ ಮಾಹಿತಿ, ಮಾರ್ಗದರ್ಶನ, ಮದ್ಯವರ್ಜನ ತರಬೇತಿ, ಪಡೆಯಲು
ಮೊ.ನಂ. 9972325690 ಗೆ ಸಂಪರ್ಕಿಸಲು ವಿನಂತಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!