ಗದಗ :ಜಯ ಕರ್ನಾಟಕ ಜನಪರ ವೇದಿಕೆ
ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಬಿ. ಗುಣ ರಂಜನ್ ಶೆಟ್ಟಿ ಅಣ್ಣನವರ ಸಾರಥ್ಯದಲ್ಲಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎಂಬ ವಾಕ್ಯದಿಂದ ಪ್ರಾರಂಭಗೊಂಡ ಜಯ ಕರ್ನಾಟಕ ಜನಪರ ವೇದಿಕೆಯ ಸಂಘಟನೆ ರಾಜ್ಯ ಅಧ್ಯಕ್ಷರಾದ ಶ್ರೀ ಜೆ. ಶ್ರೀನಿವಾಸ ರವರ ಅಧ್ಯಕ್ಷತೆಯಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಸಂಘಟನೆ ಕರ್ನಾಟಕ ರಾಜ್ಯಾದ್ಯಂತ ದೀನ ದಲಿತರ, ಬಡವರ, ರೈತರ ,ಮಹಿಳೆಯರ ಹಾಗೂ ಪರಿಸರ, ಹಾಗೂ ಅರಣ್ಯ ಸಂರಕ್ಷಣೆ ಹಾಗೂ ಸರ್ಕಾರ ಹಾಗೂ ಜನ ಸಾಮಾನ್ಯರ ಮಧ್ಯದಲ್ಲಿ ಸೇತುವೆಯಾಗಿ ಕೆಲಸ ಮಾಡುತ್ತಿರುವ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ದಿನಾಂಕ 13/12/2025 ರಂದು ನಡೆಯಲಿರುವ ನವೋದಯ ಪರೀಕ್ಷೆ ಕೊಠಡಿಯಲ್ಲಿ ಪ್ರತಿಯೊಂದು ಕೊಠಡಿಯಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ಮತ್ತು ಪರೀಕ್ಷೆ ನಡೆಯುವ ಸ್ಥಳದಲ್ಲಿ ಆಯೋಜಿಸಿರುವ ಶಿಕ್ಷಕರು ಕಡ್ಡಾಯವಾಗಿ ನಿಯಮವನ್ನು ಪಾಲಿಸಬೇಕು ಮತ್ತು ನ್ಯಾಯಯುತವಾಗಿ ಪರೀಕ್ಷೆಯನ್ನು ನಡೆಸಬೇಕು ಕಲಿತಂತ ವಿದ್ಯಾರ್ಥಿಗಳಿಗೆ ಯಾವುದೇ ತರಹದ ತೊಂದರೆಗಳು ಅಡ್ಡಿ ಆತಂಕಗಳು ಆಗಬಾರದು ಒಂದು ವೇಳೆ ಪರೀಕ್ಷೆ ನಡೆಯುವ ಕೊಠಡಿಯಲ್ಲಿ ಯಾವುದೇ ರೀತಿಯ ಅಸಭ್ಯ ವರ್ತನೆ ಅಥವಾ ಮಕ್ಕಳಿಗೆ ಕಾಪಿ ಚೀಟಿ ಮತ್ತು ಸಿ ಸಿ ಕ್ಯಾಮೆರಾಗಳು ಇಲ್ಲದೆ ಇದ್ದಲ್ಲಿ ಅಂತಹ ಕೊಠಡಿಗಳಿಗೆ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೊಣೆಯಾಗಿರುತ್ತಾರೆ ಆದ ಕಾರಣ ಅಂತ ಘಟನೆಗಳು ಜರಗದಂತೆ ಮುನ್ನೆಚ್ಚರಿಕೆ ವಹಿಸಿ ಪರೀಕ್ಷೆಯ ಕೊಠಡಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ರೀತಿಯಾಗಿ ಕಾನೂನು ಅಡಿಯಲ್ಲಿ ಪರೀಕ್ಷೆಯನ್ನು ನಡೆಸಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಹಾಲಪ್ಪ ಈ ವರವಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿರುತ್ತಾರೆ.
ವರದಿ – ಸದಾಶಿವ ಭೀ ಮುಡೆಮ್ಮನವರ



















