
ಯಾದಗಿರಿ/ಗುರುಮಠಕಲ್: ಡಿ.17 ಪಟ್ಟಣದ ಲಘು ಮೊಟಾರ್ ವಾಹನ ಚಾಲಕರು, ಸರಕು ಸಾಗಣೆ ವಾಹನ ಚಾಲಕರು ಹಾಗೂ ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರಲ್ಲಿ ಅಪರಾಧ ತಡೆ ಮಾಸಾಚರಣೆಯ ಭಾಗವಾಗಿ ಬುಧವಾರದಂದು ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಕಾನೂನು ಮತ್ತು ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಆರಕ್ಷಕ ನಿರೀಕ್ಷಕರಾದ ವೀರಣ್ಣ ದೊಡ್ಡಮನಿಯವರು ವಾಹನ ಚಾಲಕರನ್ನು ಉದ್ದೇಶಿಸಿ ರಸ್ತೆ ಸುರಕ್ಷತೆ, ಸಂಚಾರ ನಿಯಮ ಪಾಲನೆಯ ಅಗತ್ಯತೆ, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧಾರಣೆ ಕಡ್ಡಾಯ, ಮದ್ಯಪಾನ ಮಾಡಿ ವಾಹನ ಚಲಾಯಿಸುವ ಅಪಾಯ ಮತ್ತು ಕಾನೂನಾತ್ಮಕ ಪರಿಣಾಮಗಳ ಬಗ್ಗೆ ವಿವರಿಸಿದರು.
ಅಪರಾಧ ತಡೆಗೆ ಸಾರ್ವಜನಿಕರು ಪೊಲೀಸರ ಜೊತೆ ಸಹಕರಿಸಬೇಕೆಂದು ಕಾನೂನು ಜಾಗೃತಿ ಕೂಡಾ ನೀಡಲಾಯಿತು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಶಿವರಾಮ ರೆಡ್ಡಿ, ಆಟೋ, ಲಘು ವಾಹನ, ಸರಕು ಸಾಗಣೆ ವಾಹನ ಚಾಲಕರು, ಸಾರ್ವಜನಿಕರು ಭಾಗಿಯಾದರು.
ವರದಿ: ಜಗದೀಶ್ ಕುಮಾರ್ ಭೂಮಾ



















