ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಎಸ್ ಎಂ ಬಿರಾದಾರ್ (ಲಚ್ಯಾಣ) ಇವರ ಶೈಕ್ಷಣಿಕ ಸಾಧನೆಯನ್ನು ಪರಿಗಣಿಸಿ, ಚಿತ್ರದುರ್ಗದ ಶಿಕ್ಷಣ ಜ್ಞಾನ ಪತ್ರಿಕೆಯವರು ನೀಡುವ “ಜ್ಞಾನ ಜ್ಯೋತಿ”ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಾಳೆ ರವಿವಾರ ದಿ: 21/12/2025 ರಂದು ಹಾಸನ ನಗರದ ಶಿವಲಿಂಗೇಶ್ವರ ಕಲ್ಯಾಣ ಮಂದಿರದಲ್ಲಿ ನಡೆಯಲಿರುವ ಶಿಕ್ಷಣ ಜ್ಞಾನಪತ್ರಿಕೆಯ 23 ನೇ ವಾರ್ಷಿಕೋತ್ಸವ, ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಪ್ರಶಸ್ತಿಗಳ ಆಯ್ಕೆ ಸಮಿತಿಯ ವಿಜಯಪುರ ಜಿಲ್ಲಾ ಪ್ರತಿನಿಧಿ ಆರ್ ವಿ ಪಾಟೀಲ್ (ಹಿರೇ ಬೇವನೂರ) ಶಿಕ್ಷಕರು ತಿಳಿಸಿದ್ದಾರೆ.
ಪ್ರಶಸ್ತಿ ವಿಜೇತ ಎಸ್ಎಂ ಬಿರಾದಾರ್ ಶಿಕ್ಷಕರಿಗೆ ಅಗರಖೇಡ ಗ್ರಾಮದ ಹಿರಿಯರು ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಹ ಸಿಬ್ಬಂದಿಯವರು ಮತ್ತು ಇಂಡಿ ತಾಲೂಕಿನ ಶಿಕ್ಷಕರ ಬಳಗದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವರದಿ ಮನೋಜ್ ನಿಂಬಾಳ



















