ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಘನಘೋರ ದುರಂತ : ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

ಚಿತ್ರದುರ್ಗ : ಕ್ರಿಸ್​​​ಮಸ್​​ ಸಂಭ್ರಮ ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ನಿನ್ನೆ ರಾತ್ರಿ (ಡಿ.25) ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9 ಜನ ಸಾವನ್ನಪ್ಪಿದ್ದಾರೆ.

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿಉರಿದಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್​ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್​ ಕೋಚ್​​ ಬಸ್​​​ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಇನ್ನು ಈ ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ಹೇಳಾಗಿದೆ. ಬಸ್​​​ ಬೆಂಗಳೂರಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು. ಇದೀಗ ಘಟನಾ ಸ್ಥಳಕ್ಕೆ ಎಸ್​ಪಿ ರಂಜಿತ್​​ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

ಇನ್ನು ಈ ಬಸ್ಸಿನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದರು. ಒಟ್ಟು 32 ಸೀಟ್​ಗಳ ಬಸ್​​ನಲ್ಲಿ 29 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಬಸ್​​ನಲ್ಲಿ ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಇನ್ನು ಈ ಬಸ್ಸಿನಲ್ಲಿ ಮಂಜುನಾಥ್​, ಸಂಧ್ಯಾ, ಶಶಾಂಕ್​, ದಿಲೀಪ್​, ಪ್ರೀತೀಶ್ವರನ್,​ ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್​, ಮಾನಸ, ಮಿಲನಾ, ಹೇಮರಾಜ್​ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್​, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್​, ಹೆಚ್​.ಕಿರಣ್ ಪಾಲ್​, ಎಂ.ಕೀರ್ತನ್ ಸೇರಿದಂತೆ 29 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಬಸ್ ಚಾಲಕ, ನಿರ್ವಾಹಕ ಮತ್ತು ಕೆಲವರು ಬಸ್ ನಿಂದ ಹೊರ ಜಿಗಿದು ಬಚಾವ್​​ ಆಗಿದ್ದಾರೆ. ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಬಸ್ ನಲ್ಲಿ ತೆರಳುತ್ತಿದ್ದ ಬೆಂಗಳೂರು ಮೂಲದ ಗಗನ ಶ್ರೀ, ರಕ್ಷಿತಾ ಹಾಗೂ ಗೋಕರ್ಣ ಮೂಲದ ರಶ್ಮಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಇದೀಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 30 ಕಿ.ಮೀ. ದೂರದ ವರೆಗೆ ಟ್ರಾಫಿಕ್ ಜಾಮ್​​ ಆಗಿದ್ದು, ಶಿರಾವರೆಗೂ ಕಿಲೋ ಮೀಟರ್​ಗಟ್ಟಲೇ ವಾಹನಗಳು ನಿಂತಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!