ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾವಿತ್ರಿಬಾಯಿ ಫುಲೆ ಜನ್ಮ ದಿನದ ಪ್ರಯುಕ್ತ ಮಕ್ಕಳಿಗೆ ಅಂಕಲಿಪಿ ವಿತರಣೆ.

ಯಾದಗಿರಿ/ಗುರುಮಠಕಲ್ : ಭಾರತೀಯ ಸಮಾಜ ಲಿಂಗಬೇಧದ ಅಸಮಾನತೆಯಲ್ಲಿ ಬಳಲುತ್ತಿದ್ದಾಗ, ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಮೇಲ್ದರ್ಜೆಯ ಸಮಾಜ ನಿರಾಕರಿಸಿದ್ದ ಕಾಲಘಟ್ಟದಲ್ಲಿ ಸಾವಿತ್ರಿಬಾಯಿ ಫುಲೆ ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಮೊದಲ ಮಹಿಳಾ ಶಿಕ್ಷಕಿ ಎಂದು ಲಾಲಪ್ಪ ತಲಾರಿ ತಾಲೂಕಾ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಅಭಿಪ್ರಾಯಪಟ್ಟರು.

ಪಟ್ಟಣದದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು 80ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅಂಕಲಿಪಿ ವಿತರಿಸಿ ಮಾತನಾಡಿದರು.

ದಲಿತ ಮತ್ತು ಶೋಷಿತ ಸಮುದಾಯದ ಬಾಲಕಿಯರಿಗೆ ಶಾಲೆ ಪ್ರಾರಂಭಿಸಿ, ಶಿಕ್ಷಕಿಯಾದ ಸಾವಿತ್ರಿಬಾಯಿ ಫುಲೆ ಅವರ ಜೀವನ ರೋಚಕವಾದುದು, ಸಮಾಜದ ಬಹಿಷ್ಕಾರ ಹಾಗೂ ಹೆಜ್ಜೆ ಹೆಜ್ಜೆಗೂ ಅವಮಾನ ಅನುಭವಿಸಿದರೂ, ಛಲ ಬಿಡದೇ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ ಸಾವಿತ್ರಿಬಾಯಿಯನ್ನು ಭಾರತೀಯ ಸಮಾಜ ಎಂದೂ ಮರೆಯಬಾರದು ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಮೂಹ ಸಂಪನ್ಮೂಲ ವ್ಯಕ್ತಿ ಬಾಲಪ್ಪ ಸಿರಿಗೆಂ ಸಾವಿತ್ರಿ ಬಾಯಿ ಫುಲೆ ಹಿಂದುಳಿದ ಹೆಣ್ಣುಮಕ್ಕಳಿಗೆ ಅಕ್ಷರ ಕಲಿಸುತ್ತಾರೆಂದು ಅವರ ಮೇಲೆ ಸೆಗಣಿ ಎರಚಲಾಯಿತು. ಕಲ್ಲು ತೂರಲಾಯಿತು. ಈಗ ಸರಕಾರದಿಂದ ಸಾಕಷ್ಟು ಪ್ರಮಾಣದಲ್ಲಿ ಸೌಲಭ್ಯ ನೀಡುತ್ತಿದ್ದು ಎಲ್ಲರೂ ಸದುಪಯೋಗ ಪಡೆದುಕೊಳ್ಳಲು, ಹಾಗೂ ಪೋಷಕರು ಮಕ್ಕಳಿಗೆ ಮನೆಯಲ್ಲಿ ಕಲಿಕಾ ವಾತಾವರಣ ಸೃಷ್ಟಿ ಮಾಡಬೇಕು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯ ಗುರುಗಳು ಕಲಾವತಿ, ಎಸ್ ಡಿ ಎಮ್ ಸಿ ಅಧ್ಯಕ್ಷ ಭೀಮಶಪ್ಪ, ಪುರಸಭೆ ನಾಮ ನಿರ್ದೇಶಕ ಸದಸ್ಯ ಭೀಮಶಪ್ಪ ಶನಿವಾರಂ, ಮಾತನಾಡಿ ಮಕ್ಕಳೊಂದಿಗೆ ಪೋಷಕರ ಹಾಗೂ ಶಿಕ್ಷಕರ ಸಂಪರ್ಕ ನಿರಂತರವಾಗಿ ಇರುವದರಿಂದ ಮಕ್ಕಳ ಕಲಿಕೆ ಮಟ್ಟ ಹೆಚ್ಚಾಗುತ್ತದೆ, ಪ್ರತಿ ನಿತ್ಯ ಮಕ್ಕಳು ಶಾಲೆಯಿಂದ ಮನೆಗೆ ಬಂದ ತಕ್ಷಣ ಅವರೊಂದಿಗೆ ಶಾಲೆಯಲ್ಲಿ ಬೋಧಿಸಿದ ವಿಷಯಗಳ ಅವಲೋಕನೆ ಮಾಡಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಎಸ್ಎಸ್ ಕಿಷ್ಟಪ್ಪ ಸೈದಾಪುಳ ಯಲ್ಲಪ್ಪ ಶ್ರೀಕಾಂತ್ ತಲಾರಿ, ನರೇಶ್ ನಾಟೆಕರ್, ಯಲ್ಲಪ್ಪ ಪಾಪನೂಳ ಭೀಮಾಶಪ್ಪ ಗುಡಸೆ, ಶಾಲೆಯ ಶಿಕ್ಷಕರು, ಪೋಷಕರು ಭಾಗವಹಿಸಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!