ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಿಂದುಳಿದ ವರ್ಗಗಳ ವಿಭಾಗದ ತಾಲೂಕ ಅಧ್ಯಕ್ಷರಾಗಿ ಸುರೇಶ ಶಿವಪ್ಪ ಮೇಸ್ತ ನೇಮಕ.
ಹೊನ್ನಾವರ : ತಾಲೂಕಿನ ಪ್ರಭಾತ್ ನಗರದ ಕಾಂಗ್ರೆಸ್ ಕಾರ್ಯಕರ್ತ ಸುರೇಶ ಶಿವಪ್ಪ ಮೇಸ್ತ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ರಾಷ್ಟ್ರೀಯ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಇವರ ನಿರ್ದೇಶನದಂತೆ ಮತ್ತು ರಾಜ್ಯದ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಶ್ರೀ ಎಸ್. ಮಧು ಬಂಗಾರಪ್ಪ ಮತ್ತು ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಾಯಿ ಗಾoವಕರ್ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮಂಕಾಳು ವೈದ್ಯ ಇವರುಗಳ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ವಿಭಾಗದ ಹೊನ್ನಾವರ ತಾಲೂಕ ನಗರ ಘಟಕ ಅಧ್ಯಕ್ಷರ ಹುದ್ದೆಗೆ ಆಯ್ಕೆ ಮಾಡಲಾಗಿದೆ.
ಅಭಿಷೇಕ್ ಜಗದೀಶ್ ತಾಂಡೇಲ ( B.E, M.tech).
KPCC ಜಂಟಿ ಕಾರ್ಯದರ್ಶಿ ಮೀನುಗಾರಿಕೆ ಇಲಾಖೆ ಬೆಂಗಳೂರು ಇವರು ಈ ವಿಷಯವನ್ನು ತಿಳಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ : ವಿನಾಯಕ ಆಚಾರಿ, ಹೊನ್ನಾವರ (ಉತ್ತರಕನ್ನಡ)




















