ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಹಶೀಲ್ದಾರ್ ಕಚೇರಿ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಶಿಕ್ಷಕ ಆತ್ಮಹತ್ಯೆ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಅವರು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್ ಎಲ್ ಭಜಂತ್ರಿ, ಸಿಂದಗಿ ಬಿಇಓ, ಸಿಆರ್‌ಪಿ ಜಿ.ಎನ್ ಪಾಟೀಲ್, ಟಾರ್ಚರ್ ಆತ್ಮಹತ್ಯೆಗೆ ಕಾರಣವೆಂದು ಉಲ್ಲೇಖ ಮಾಡಲಾಗಿದೆ.

ಎಸ್ಎಲ್ ಭಜಂತ್ರಿ ಅವರು ಮುಖ್ಯಶಿಕ್ಷಕ ಹುದ್ದೆಯ ಚಾರ್ಜ್‌ನ್ನು ಶಿಕ್ಷಕ ಬಸವರಾಜ ಅವರಿಗೆ ಬಿಟ್ಟು ಕೊಟ್ಟಿದ್ದರು ಚಾರ್ಜ್ ಬಿಟ್ಟುಕೊಡುವ ವೇಳೆ ಶಿಕ್ಷಕರ, ಹಾಗೂ ಮಕ್ಕಳ ಹಾಜರಾತಿ, 1ನೇ ನಂಬರ್ ರಿಜಿಸ್ಟರ್ ಹಸ್ತಾಂತರ ಮಾಡಿದ್ದರು ಆದರೆ,ವಿದ್ಯಾರ್ಥಿಗಳ ದಾಖಲಾತಿ ವಿವರ, ಜಾತಿ, ಜನ್ಮದಿನಾಂಕವುಳ್ಳ 1ನೇ ನಂಬರ್ ರಿಜಿಸ್ಟರ್ ಅಪೂರ್ಣವಾಗಿತ್ತು ಎನ್ನಲಾಗಿದೆ. “ನಾನು ಸಿಆರ್ ಪಿ ಆಗುತ್ತೇನೆ ಆಗಾಗ ಬಂದು 1ನೇ ನಂಬರ್ ರಿಜಿಸ್ಟರ್ ಸರಿಪಡಿಸೋದಾಗಿ ಎಸ್ ಎಲ್ ಭಜಂತ್ರಿ ಹೇಳಿದ್ದರೆನ್ನಲಾಗಿದೆ. ಆದರೆ, ಚಾರ್ಜ್ ಬಿಟ್ಟುಕೊಟ್ಟ ಬಳಿಕ ಅವರು ಸತಾಯಿಸಿದ್ದರು” ಎನ್ನಲಾಗಿದೆ.

ಈ ನಡುವೆ ಸಿಂದಗಿ ಬಿಇಒ ಎಚ್.ಎಂ. ಹರಿನಾಳ್ ಈ ವಿಚಾರದಲ್ಲಿ ನೋಟಿಸ್ ನೀಡಿ ಹಿಂಸೆ ನೀಡಲು ಶುರು ಮಾಡಿದ್ದರು ಎನ್ನಲಾಗಿದೆ. ಭಜಂತ್ರಿ ಅವರು ದಾಖಲೆಗಳನ್ನು ಅಪೂರ್ಣವಾಗಿ ಬಿಟ್ಟುಹೋಗಿರುವ ವಿಚಾರವನ್ನು ಬಿಇಒ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ ಎನ್ನಲಾಗಿದೆ.

ಈ ನಡುವೆ, ಸಾಸಾಬಳ ಶಾಲೆಯ ಟಿಜಿಟಿ ಶಿಕ್ಷಕ ಬಿಎಂ ತಳವಾರ ಹಿಂದಿನಿಂದಲೂ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಗ್ರಾಮದ ಸಂಗಮೇಶ್ ಚಿಂಚೋಳಿ ಮೂಲಕ ಆರೋಪಗಳನ್ನು ಮಾಡಿ ಸಿಆರ್ ಪಿ ಹಾಗೂ ಸಂಗಮೇಶ್ ನನ್ನಿಂದ ಹಣ ಪಡೆದಿದ್ದರು ಎಂದೂ ಡೆತ್ ನೋಟ್‌ನಲ್ಲಿ ತಿಳಿಸಲಾಗಿದೆ. ಬಿಸಿಯೂಟ ಯೋಜನೆಯಡಿ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದ ಎಂದು ಹೇಳಲಾಗಿದೆ. ಸಂಗಮೇಶ್ ಚಿಂಚೋಳಿ, ಶಿಕ್ಷಕ ಬಸವರಾಜ್ ವಿರುದ್ಧ ಬಿಇಓಗೆ ದೂರು ಕೊಟ್ಟಿದ್ದರು.

ತಾಲೂಕು ಆಸ್ಪತ್ರೆಯ ಶವಾಗಾರದ ಬಳಿ ಶಿಕ್ಷಕ ಬಸವರಾಜ್ ಆತ್ಮಹತ್ಯೆಗೆ ಸಂಬಂಧ ಪಟ್ಟಂತೆ ಶಿಕ್ಷಕ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದ ಆರೋಪಿಗಳನ್ನು ಅಮಾನತ್ತು ಮಾಡುವದರ ಜೊತೆಗೆ ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ಅವರೊಂದಿಗೆ ಕುಟುಂಬಸ್ಥರು ವಾಗ್ವಾದ ನಡೆಸಿದರು.ಇನ್ನೂ ಅವರನ್ನು ಬಂಧಿಸಿ ಜೈಲಿಗೆ ಕಳಿಸುವದು ನಮ್ಮಕೆಲಸ ಅದನ್ನು ಮಾಡೇ ಮಾಡುತ್ತೇನೆ ಎಂದು ಇದೇ ವೇಳೆ ಡಿವೈಎಸ್ಪಿ ತಿಳಿಸಿದರು.

ವರದಿ : ಮುಹಮ್ಮದ ನಾಸೀರ ಇನಾಮದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ