ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಾಸವಿ ಅಮ್ಮನ ತ್ಯಾಗ ಸಮಾಜಕ್ಕೆ ಮಾದರಿ : ಡಿ. ಮಂಜೇಶ

ಕಂಪ್ಲಿ : ಪಟ್ಟಣದ ಚಂದ್ರಕಲಾ ಚಿತ್ರಮಂದಿರದಲ್ಲಿ ತೆರೆ ಕಂಡ ವಿಶ್ವರೂಪಿಣಿ ವಾಸವಿ ಚಿತ್ರಕ್ಕೆ ಆರ್ಯವೈಶ್ಯ ಸಮಾಜದವರು ಚಾಲನೆ ನೀಡಿದರು.

ಆರ್ಯ ವೈಶ್ಯ ಸಮುದಾಯದ ಕುಲದೇವತೆಯಾಗಿರುವ ವಾಸವಿ ಅಮ್ಮ (ಕನ್ಯಕಾ ಪರಮೇಶ್ವರಿ) ತನ್ನ ಕುಲವನ್ನು ಮತ್ತು ಸ್ತ್ರೀಯರನ್ನು ರಕ್ಷಿಸುವ ಉದ್ದೇಶಕ್ಕೆ ಅಗ್ನಿ ಪ್ರವೇಶ ಮಾಡಿದ್ದಾಳೆ. ಇಂದು ಸಮಾಜ ಕಟ್ಟುವ ಕಾರ್ಯಕ್ಕೆ ಅಮ್ಮ ಮಾದರಿಯಾಗಿದ್ದಾರೆ ಎಂದು ವಾಸವಿ ಯುವಜನ ಸಂಘದ ಅಧ್ಯಕ್ಷ ಡಿ. ಮಂಜೇಶ್ ಹೇಳಿದರು.

ಇಲ್ಲಿನ ಚಂದ್ರಕಲಾ ಚಿತ್ರಮಂದಿರದಲ್ಲಿ ತೆರೆ ಕಂಡ ‘ವಿಶ್ವರೂಪಿಣಿ ವಾಸವಿ’ ಚಲನ ಚಿತ್ರದ ಪ್ರದರ್ಶನದಲ್ಲಿ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಭಕ್ತಿ ಪ್ರಧಾನ ಬುಧವಾರ ಚಾಲನೆ ನೀಡಿ ಚಿತ್ರಗಳು ಅಪರೂಪ ಎಂಬಂತೆ ಬೆಳ್ಳಿ ತೆರೆಯ ಮೇಲೆ ಬರುತ್ತಿವೆ. ಮಹಿಳೆಯರು ಮತ್ತು ಮಕ್ಕಳು ಸಮೇತ ಇಡೀ ಕುಟುಂಬ ಸದಸ್ಯರು ಕುಳಿತು ನೋಡುವ ಕೌಟಂಬಿಕ ಚಿತ್ರಗಳು ಇತ್ತೀಚೆಗೆ ಕಡಿಮೆಯಾಗುತ್ತಿವೆ. ಕುಟುಂಬ, ಸಂಸಾರದ ಸ್ವಾಸ್ಥ್ಯ ಕದಡುವ ಧಾರವಾಹಿಗಳಿಂದಾಗಿ ಇಂದು ಸಮಾಜ ದಾರಿ ತಪ್ಪುತ್ತಿದೆ.
ಇದು ಸರಿಯಾಗಬೇಕಾದರೆ ಧರ್ಮ ಜಾಗೃತಿ, ಆಧ್ಯಾತ್ಮ ವಸ್ತು ವಿಷಯದ ಚಿತ್ರಗಳು ಹೆಚ್ಚಾಗಬೇಕಿದ್ದು, ಜನ ಕೂಡ ಇವುಗಳನ್ನು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.

ಶ್ರೀ ವಾಸವಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿ ಸಿಹಿ ಹಂಚಲಾಯಿತು.

ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಧರ್ಮಕರ್ತರು ವೈ. ಚಂದ್ರಮೋಹನ ಶೆಟ್ಟಿ, ಆರ್ಯವೈಶ್ಯ ಸಮಾಜದ ಅಧ್ಯಕ್ಷ ಡಿ.ವಿ. ಸುಬ್ಬರಾವ್, ವಾಸವಿ ವಿದ್ಯಾ ಸಂಸ್ಥೆ ಅಧ್ಯಕ್ಷ ಡಿ. ಶ್ರೀಧರ ಶೆಟ್ಟಿ, ವಾಸವಿ ಅಭಿವೃದ್ಧಿ ಸಂಘದ ಅಧ್ಯಕ್ಷ ಜಿ. ಬಿ ಕೋಟೇಶ್ವರರಾವ್, ವಾಸವಿ ಮಹಿಳಾ ಸಂಘದ ಅಧ್ಯಕ್ಷೆ ಟಿ. ರಾಮಾದೇವಿ ಹಾಗೂ ಸಮಾಜ ಬಾಂಧವರು ಸೇರಿದಂತೆ ಮತ್ತಿತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!