ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಟಕಲ್ : ಮಹಾಲಕ್ಷ್ಮಿ ಪೂಜೆ, ಧಾರ್ಮಿಕ ಸಭೆ.

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಚಿಂಚೋಳಿ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ರಟಕಲ್ ಕೋಡ್ಲಿ ವಲಯ ವತಿಯಿಂದ ಹಮ್ಮಿಕೊಂಡ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ ಸಮಾರಂಭವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರಾಜೇಶ ಗುತ್ತೇದಾರ ಉದ್ಘಾಟಿಸಿದರು.
ಕರ್ನಾಟಕದ ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಪಾತ್ರ ವಹಿಸಿದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸಲು ಸ್ವಸಹಾಯ ಗುಂಪುಗಳು, ಸೂಕ್ಷ್ಮ ಸಾಲ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಕಾರ್ಯನಿರ್ವಹಿಸುತ್ತದೆ, ಇದು ಸ್ವ ಉದ್ಯೋಗ, ಶಿಕ್ಷಣ ಮತ್ತು ಜ್ಞಾನವಿಕಾಸ, ಗ್ರಾಮೀಣವಸತಿ ಯೋಜನೆ, ಕೃಷಿ ಅಭಿವೃದ್ಧಿ, ನೈರ್ಮಲ್ಯ ಮತ್ತು ಆರೋಗ್ಯ ಪರಿಸರ ಸಂರಕ್ಷಣೆ ಮತ್ತು ಆರ್ಥಿಕ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತದೆ ಮತ್ತು ರಾಜ್ಯಾದ್ಯಂತ ಸಾವಿರಾರು ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ನ ಕಲಬುರಗಿ ಜಿಲ್ಲಾ ನಿರ್ದೇಶಕ ಗಣಪತಿ ಮಾಳಂಜೆ ಹೇಳಿದರು.

ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರಾಜೇಶ ಗುತ್ತೇದಾರ ಮಾತನಾಡಿ, ಹೆಣ್ಣು ತ್ಯಾಗದ ಸಾಕಾರ ಮೂರ್ತಿಯಾಗಿದ್ದಾಳೆ, ಹೆಣ್ಣು ಸಮಾಜದ ಅಭಿವೃದ್ಧಿಗೆ ಕಾರಣೀಭೂತಳಾಗಿದ್ದಾಳೆ ಎಂದು ಹೇಳಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿದರು.

ರಟಕಲ್ ವಿರಕ್ತ ಮಠದ ಪೂಜ್ಯ ನೀಲಕಂಠ ಮರಿದೇವರು, ಪೂಜ್ಯ ರೇವಣಸಿದ್ದ ಶಿವಾಚಾರ್ಯರು, ಗೌರಿಗುಡ್ಡದ ಪೂಜ್ಯ ರೇವಣಸಿದ್ದ ಶರಣರು, ಕೋಡ್ಲಿಯ ಪೂಜ್ಯ ಬಸವಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು.
ರಟಕಲ್‌ ಪಿಎಸ್‌ಐ ಶೀಲಾದೇವಿ, ಮುಖಂಡರಾದ ಬಸವರಾಜ ಚೊಕಾ, ಸಿದ್ದಯ್ಯ ಕಿಣ್ಣಿ, ಮಹಾದೇವಪ್ಪ ಭೀಮಳ್ಳಿ, ತರುಣ ಶೇಖರ ಬಿರಾದಾರ, ಮಲ್ಲಣ್ಣ ಭೈರಪ್ಪ, ರೈತ ಸಂಘದ ಕಾಳಗಿ ತಾಲೂಕು ಅಧ್ಯಕ್ಷ ವೀರಣ್ಣ ಗಂಗಾಣಿ, ಮಲ್ಲಿನಾಥ್ ಮುಚ್ಚೆಟ್ಟಿ, ಹಿಂದೂ ಜಾಗೃತಿ ಸೇನೆಯ ತಾಲೂಕು ಅಧ್ಯಕ್ಷ ಶಂಕರ ಚೊಕಾ, ಶಿವರಾಜ ಭೀಮಳ್ಳಿ, ರೇವಣಸಿದ್ದ ಪಡಶೆಟ್ಟಿ, ಮಲ್ಲಿಕಾರ್ಜುನ ಬೆಡಸೂರ, ಲಾಲ್ ಸಾಬ್‌ ಹೊಳಕುಂದ, ರಾಜೇಶ್ವರಿ ಕಟ್ಟಿಮನಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಯೋಜನಾಧಿಕಾರಿಗಳು, ಕೋಡ್ಲಿ ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಸ್ವಸಹಾಯ ಸಂಘಗಳ ಒಕ್ಕೂಟ ಸದಸ್ಯರು ಸೇರಿದಂತೆ ಇತರರು ಭಾಗವಹಿಸಿದ್ದರು.
ಲಲಿತಾ ಪ್ರಾರ್ಥಿಸಿದರು. ಶಕುಂತಲಾ ನಿರೂಪಿಸಿ, ವಂದಿಸಿದರು.

ವರದಿ ಎಸ್ ವಿ ಗಂಗಾಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!