ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೃಷಿ ಸಹಕಾರ ಸಂಘಗಳು ಗ್ರಾಮೀಣ ಜನರ ಜೀವನಾಡಿ-ಕೆ. ಷಡಕ್ಷರಿ

ತಿಪಟೂರು-ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಗ್ರಾಮೀಣ ಜನರ ಜೀವನದೊಂದಿಗೆ ಬೆರೆತಿದ್ದು ಅವರ ಪ್ರತಿನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಒಂದಲ್ಲ ಒಂದು ರೀತಿಯ ಭಾಗವಾಗಿದೆ ಎಂದು ತುಮಕೂರು ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಮಾಜಿ ಶಾಸಕರಾದ ಶ್ರೀ ಕೆ ಷಡಕ್ಷರಿಯವರು ತಿಳಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಷಡಕ್ಷರಿ ಅವರು ಸಹಕಾರ ಸಂಘಗಳನ್ನು ಬಲಪಡಿಸುವ ಮೂಲಕ ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷರಾದ ವೆಂಕಟೇಗೌಡ ಮಾತನಾಡಿ ಸಹಕಾರಿ ಸಂಘಗಳಲ್ಲಿ ಸಮಯಕ್ಕೆ ಸರಿಯಾಗಿ ಲೆಕ್ಕಪರಿಶೋಧನೆ ಮಾಡುವ ಮೂಲಕ ಪಾರದರ್ಶಕ ವ್ಯವಹಾರ ನಡೆಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಶಿಧರ ಎಲೆ,ನಿವೃತ್ತ ಜಂಟಿ ನಿಬಂಧಕರು ಸಹಕಾರ ಇಲಾಖೆ ರವರು ಇತ್ತೀಚಿನ ಕಾನೂನು ತಿದ್ದುಪಡಿ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸಹಕಾರ ಯೂನಿಯನ್ ನಿರ್ದೇಶಕರಾದ ರಾಜಶೇಖರಯ್ಯ,ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್, ಮೇಲ್ವಿಚಾರಕರಾದ ಟಿ.ಪಿ.ಉಮಾಶಂಕರ್, ಸಹಕಾರ ಯೂನಿಯನ್ ಸಿಇಓ ಮಹಾಂತೇಶ್ ಹಿರೇಮಠ್, ವ್ಯವಸ್ಥಾಪಕ ದಯಾನಂದ್ ಹಾಗೂ ತಿಪಟೂರು ತಾಲೂಕಿನ ಕೃಷಿ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಜರಿದ್ದರು.

ಕಾರ್ಯಕ್ರಮದಲ್ಲಿ ವೇಣುಗೋಪಾಲ್ ಸ್ವಾಗತಿಸಿ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಿಇಓ ಮನು ಎಸ್ಎಂ ನಿರೂಪಿಸಿದರು.

ವರದಿ:ಮನು ಸಿಡ್ಲೇಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ