ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂಗ್ಲಿಷ್ ವಿಷಯದಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಹಾಗೂ ಉಪನ್ಯಾಸಕ ಸಂಗಮೇಶ ಬಸರಗಿಗೆ ಪ್ರಶಸ್ತಿ ಪುರಸ್ಕಾರ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಡಿಭಾಗದ ಗುರುಕುಲ ಶಿಕ್ಷಣ ಸಂಸ್ಥೆಯ
ಉಪನ್ಯಾಸಕ ಸಂಗಮೇಶ ಬಸರಗಿಗೆ ಇಂಗ್ಲಿಷ್ ಉಪನ್ಯಾಸಕ ವೇದಿಕೆಯಿಂದ ಪ್ರಶಸ್ತಿ ಪುರಸ್ಕಾರ
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಇಂಗ್ಲೀಷ್ ಭಾಷೆಯ ಉಪನ್ಯಾಸಕ ವೇದಿಕೆಯಿಂದ ಪ್ರತಿಷ್ಠಿತ ಸಿ ಎಲ್ ಇ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ 2021-22 ನೇ ಸಾಲಿನ ಇಂಗ್ಲೀಷ್ ವಿಷಯದಲ್ಲಿ ಸಾಧನೆಗೈದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಅಥಣಿ ತಾಲ್ಲೂಕಿನ ಗಡಿಭಾಗದ ಕಕಮರಿಯ ಶ್ರೀ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಸಂಗಮೇಶ ಬಸರಗಿ ಇಂಗ್ಲಿಷ್ ವಿಷಯದಲ್ಲಿ ಕಾಲೇಜಿಗೆ ಶೇಕಡಾ 100 ಕ್ಕೆ 100 ಫಲಿತಾಂಶ ನೀಡುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕಾರಣ ಅವರನ್ನು ವೇದಿಕೆಯಿಂದ ಸತ್ಕಾರ ಮಾಡಲಾಯಿತು. ಹಾಗೇಯೇ ಗ್ರಾಮೀಣ ಭಾಗದಲ್ಲಿ ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳು ಅಷ್ಪೊಂದು ಪ್ರವೀಣರಲ್ಲ ಮಾತನ್ನು ಸುಳ್ಳಾಗಿಸುವ ಮಟ್ಟಿಗೆ ರಾಯಲಿಂಗೇಶ್ವರ ಕಾಲೇಜಿನ ವಿದ್ಯಾರ್ಥಿನಿಯರಾದ ಅಂಕಿತಾ ಕಂಬಾರ ಹಾಗೂ ಅಂಕಿತಾ ಪುಠಾಣಿ ಇಂಗ್ಲಿಷ್ ವಿಷಯದಲ್ಲಿ ಜಿಲ್ಧೆಗೆ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆಯುವ ಮೂಲಕ ಕಾಲೇಜಿನ ಹೆಮ್ಮೆಯನ್ನು ಜಿಲ್ಲಾ ಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿಕ್ಕೋಡಿ ಶೈಕ್ಷಣಿಕ DDPU ಆದ ಶ್ರೀ ಪಿ ಆಯ್ ಭಂಡಾರೆ ಅಧ್ಯಕ್ಷತೆಯನ್ನು ಇಂಗ್ಲಿಷ ಉಪನ್ಯಾಸಕ ವೇದಿಕೆಯ ಅಧ್ಯಕ್ಷರಾದ ಶ್ರೀ ಎಸ್ ಡಿ ಸನಗೊಂಡ , ಕಾರ್ಯದರ್ಶಿಗಳಾದ ಶ್ರೀ ರವೀಂದ್ರ ಕಾಗಲೆ ಹಾಗೂ ಜಿಲ್ಲೆಯ ಸಮಸ್ತ ಇಂಗ್ಲಿಷ್ ಉಪನ್ಯಾಸಕ ವೃಂದವರು ಹಾಜರಿದ್ದರು.

ವರದಿ: ವಿಶ್ವನಾಥ ಹರೋಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ