ಗುರುಮಠಕಲ್: ಜ. 23 ಪಟ್ಟಣದ ವಾರ್ಡ್ ಸಂಖ್ಯೆ 12 ಮತ್ತು 13 ಹರಿಜನವಾಡ ಬಡಾವಣೆಯಲ್ಲಿನ ಹಿರಿಯ ನಾಗರಿಕರ ಪಿಂಚಣಿ ಸಮಸ್ಯೆ ಬಗೆಹರಿಸಲು ದಲಿತ ಸಂಘರ್ಷ ಸಮಿತಿ ಗುರುಮಠಕಲ್ ತಾಲೂಕ ಅಧ್ಯಕ್ಷ ಲಾಲಪ್ಪ ತಲಾರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿಯವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.
ಮನವಿಯಲ್ಲಿ ಕಳೆದ ಕೆಲ ತಿಂಗಳುಗಳಿಂದ ಅರ್ಹ ಫಲಾನುಭವಿಗಳಿಗೆ ಸರಕಾರದಿಂದ ಬರುವ ಪಿಂಚಣಿ ಸರಿಯಾಗಿ ಬರುತ್ತಿಲ್ಲ ಹಿರಿಯ ನಾಗರಿಕರು ತಮ್ಮ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸ್ಥಳಕ್ಕೆ ಭೇಟಿ ನೀಡಿ ಮಾಸಿಕ ಪಿಂಚಣಿ ತಲುಪಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೃಷ್ಣ ದಾಸರಿ, ಆಕಾಶ್ ಬ್ಯಾಗರಿ, ರಾಮಕೃಷ್ಣ ಸೈದಪೋಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ- ಕರುನಾಡ ಕಂದ




















