ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುನಗುಂದದಲ್ಲಿ ಕಾವ್ಯೋತ್ಸವ-೨೦೨೬

ಬಾಗಲಕೋಟೆ/ ಹುನಗುಂದ: ನಗರದ ಹೊನ್ನಕುಸುಮ ಸಾಹಿತ್ಯ ವೇದಿಕೆಯ ವತಿಯಿಂದ ಹೊಸ ವರ್ಷದ ಪ್ರಯುಕ್ತ ಕಾವ್ಯೋತ್ಸವವನ್ನು ವಿಜಯ ಮಹಾಂತೇಶ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ: ೨೫.೦೧.೨೦೨೬ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ತಲೆಮಾರುಗಳ ಹನ್ನೊಂದು ಜನ ಕವಿಗಳಿಂದ ಸ್ವರಚಿತ ಕವನವಾಚನ ಹಾಗೂ ಕನ್ನಡ ಕಾವ್ಯಲೋಕವನ್ನು ಪ್ರತಿನಿಧಿಸುವ ಆಯ್ದ ಹನ್ನೊಂದು ಮಾದರಿ ಕವಿತೆಗಳ ವಾಚನ ನಡೆಯಲಿದೆ. ಗಂಗಾವತಿಯ ಸಾಹಿತಿ ಹಾಗೂ ಕನ್ನಡ ಪ್ರಾಧ್ಯಾಪಕರಾದ ಡಾ. ಮಮ್ತಾಜಬೇಗಂ ಹಾಗೂ ಇಳಕಲ್ಲಿನ ಸಾಹಿತಿ ಡಾ. ಶ್ರೀದೇವಿ ಕರ್ಜಗಿಯವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಉಳಿದಂತೆ ಹೊನ್ನಕುಸುಮ ಸಾಹಿತ್ಯ ವೇದಿಕೆಯ ಎಲ್ಲಾ ಪದಾಧಿಕಾರಿಗಳು, ಹುನಗುಂದ-ಇಳಕಲ್ ತಾಲೂಕಿನ ಹಿರಿಯ-ಕಿರಿಯ ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆಂದು ಹೊನ್ನಕುಸುಮ ಸಾಹಿತ್ಯ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಮೊದಲ ಬಾರಿಗೆ ಪುಸ್ತಕಸಂತೆಯಲ್ಲಿ ಎಲ್ಲಾ ಪುಸ್ತಕಗಳ ಮೇಲೆ ೫೦% ರಿಯಾಯಿತಿಯನ್ನು ಘೋಷಿಸಲಾಗಿದ್ದು ಕಾವ್ಯಾಸಕ್ತರು ಹಾಗೂ ಪುಸ್ತಕಪ್ರಿಯರು ಇದರ ಸದುಪಯೋಗ ಪಡೆದುಕೊಳ್ಳಲು ವೇದಿಕೆಯ ಪರವಾಗಿ ಕೋರಲಾಗಿದೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!