ಕೊಪ್ಪಳ : ಬಿಜೆಪಿ ಕಾರ್ಯಾಲಯದಲ್ಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ್ ದಡೆಸುಗೂರು ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಸುಧಾರಿತ VB-G RAM G (ಉದ್ಯೋಗ ಖಾತರಿ ಯೋಜನೆ) ಜನ ಜಾಗರಣ ಅಭಿಯಾನ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯರಾದ ಶ್ರೀ ಶಿವರಾಜ್ ಸಜ್ಜನ ರವರು, ಶ್ರೀ ದೊಡ್ಡನಗೌಡ ಪಾಟೀಲ್ ಶಾಸಕರು ಕುಷ್ಟಗಿ, ಶ್ರೀ ಜಿ. ಜನಾರ್ಧನರೆಡ್ಡಿ ಶಾಸಕರು ಗಂಗಾವತಿ, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಮಾಜಿ ಸಚಿವರಾದ ಹಾಲಪ್ಪ ಆಚಾರ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಡಾಕ್ಟರ್ ಬಸವರಾಜ್ ಕ್ಯಾವಟರ್, ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ, ಮಾಜಿ ಸಂಸದರಾದ ಶ್ರೀ ಶಿವರಾಮಗೌಡ, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳಿಕೇರಿ, ವಿಭಾಗ ಸಹ ಪ್ರಭಾರಿ ಶ್ರೀ ಚಂದ್ರಶೇಖರಗೌಡ ಪಾಟೀಲ್ ಹಲಗೇರಿ, ನಿಕಟಪೂರ್ವ ಜಿಲ್ಲಾಧ್ಯಕ್ಷರು ಶ್ರೀ ನವೀನ ಕುಮಾರ್ ಗುಳಗಣ್ಣನವರ ಹಾಗೂ ಮುಖಂಡರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯರು ಜನಪ್ರತಿನಿಧಿಗಳು, ಹಿರಿಯ ಮುಖಂಡರು, ವಿವಿಧ ಸ್ತರದ ರಾಜ್ಯ, ಜಿಲ್ಲೆ, ಮಂಡಲ ಮಟ್ಟದ ಪದಾಧಿಕಾರಿಗಳು, ಮಹಿಳೆಯರು, ಭಾಗವಹಿಸಿ VB-G RAM G ಜನಜಾಗರಣ ಅಭಿಯಾನವನ್ನು ಯಶಸ್ವಿಗೊಳಿಸಿದರು.
ವರದಿ ಅಮರೇಶ ನಾಯಕ




















