ಗುರುಮಠಕಲ್: ಪಟ್ಟಣದ ನಾರಾಯಣಪುರ ಬಡಾವಣೆಯ ಸರಕಾರಿ ಭಾಷಾ ಅಲ್ಪಸಂಖ್ಯಾತರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಅಯಾಝ್ ಅಲಿ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸಕ್ಕಾಗಿ ನೋಟ್ ಬುಕ್ ಮತ್ತು ಪೆನ್ ವಿತರಿಸಿದ ಬಳಿಕ ಮಾತನಾಡಿದ ಅವರು ಭಾರತದ ಏಕತೆ, ಶಾಂತಿ ಮತ್ತು ಸಮೃದ್ಧಿಗಾಗಿ ಶ್ರಮಿಸಿದ ಮಹನೀಯರನ್ನು ಗೌರವದಿಂದ ಸ್ಮರಿಸೋಣ. ಸಶಕ್ತ ಸಂವಿಧಾನವನ್ನು ನಮಗೆ ನೀಡಿದ, ಅದನ್ನು ರೂಪಿಸಲು ಶ್ರಮಿಸಿದ ಎಲ್ಲಾ ಧೀಮಂತ ನಾಯಕರ ತ್ಯಾಗ ಬಲಿದಾನಗಳನ್ನು ನೆನೆಯುತ್ತಾ, ಸದೃಢ ಗಣತಂತ್ರ ರಾಷ್ಟ್ರ ನಿರ್ಮಾಣದ ಸಂಕಲ್ಪ ಮಾಡೋಣ,ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಿದ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಇದು ಕೇವಲ ಆಚರಣೆ ಅಲ್ಲ. ಸಂವಿಧಾನ ಜಾರಿಗೆ ಬಂದ ದಿನವನ್ನು ಗೌರವಿಸಿ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷ ನಾರಾಯಣ, ಶಾಲಾ ಮುಖ್ಯಗುರುಗಳಾದ ಶ್ರೀಮತಿ ಅನುರಾಧ ಶಾಲಾ ಸಿಬ್ಬಂದಿಯವರಾದ ಕು.ಜಯಂತಿ, ಶ್ರೀ ಮಕ್ತಾರ್ ಅಹ್ಮದ್, ಮಸರಾದ ಬೇಗಂ, ಮಹಮದ್ ಆರೀಫ್ ಶಾಲೆ ಮಕ್ಕಳು ಸೇರಿದಂತೆ ಇನ್ನಿತರ ಮುಖಂಡರು ಭಾಗಿಯಾಗಿದ್ದರು.
ವರದಿ: ಕರುನಾಡ ಕಂದ




















