ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೆಲ್ಪ್ ಸೊಸೈಟಿ ಸೇವೆ ಅನನ್ಯ : ಲೋಕೇಶ್ ಪಾಳೇಗಾರ್

ತುಮಕೂರು/ ಪಾವಗಡ : ಕರಿಯಮ್ಮನಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ಶುದ್ಧ ನೀರಿನ ಘಟಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಲೋಕೇಶ್ ಪಾಳೇಗಾರ್ ಮಾತನಾಡಿ ಗಡಿ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ಹಣೆಪಟ್ಟಿ ಇರುವ ಪಾವಗಡ ತಾಲ್ಲೂಕಿನಲ್ಲಿ ಆರೋಗ್ಯ, ಉದ್ಯೋಗ, ಸರ್ಕಾರಿ ಶಾಲೆ, ಬಡತನ, ಪ್ರಕೃತಿ ವಿಕೋಪ ಇನ್ನಿತರ ಕ್ಷೇತ್ರದಲ್ಲಿ ಸಂಕಷ್ಟದಲ್ಲಿ ಸದಾ ಸಹಾಯ ಸಹಕಾರ ಮಾಡುತ್ತಾ ಬರುತ್ತಿರುವ ಹೆಲ್ಪ್ ಸೊಸೈಟಿ ಸಂಸ್ಥೆ ಬರದ ನಾಡಿನ ಭಗೀರಥ ಎಂದರೆ ತಪ್ಪಾಗಲ್ಲ ಅವರ ಗುರಿ ಧ್ಯೇಯ ಉತ್ತಮವಾಗಿದೆ ಮಾನಂ ಶಶಿ ಕಿರಣ್ ರವರ ನೇತೃತ್ವದಲ್ಲಿ ಹೆಲ್ಪ್ ಸೊಸೈಟಿ ಸಂಸ್ಥೆ ಸೇವೆಯ
ತಾಲ್ಲೂಕಿನಲ್ಲಿ ಫ್ಲೋರೇಡ್ ಅಂಶ ಜಾಸ್ತಿ ಇದ್ದು ತಾಲ್ಲೂಕಿನ ಸಾವಿರಾರು ಜನತೆ ಮಕ್ಕಳು ವೃದ್ಧರು ಅಂಗವಿಕಲತೆಗೆ ತುತ್ತಾಗುತ್ತಿದ್ದಾರೆ ಅಂತಹ ಅಂಶವನ್ನು ಮನಗಂಡ ಹೆಲ್ಪ್ ಸೊಸೈಟಿ ಸಂಸ್ಥೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರ್ಕಾರಿ ಶಾಲೆಗಳಿಗೆ ನೀಡಿ ಫ್ಲೋರೇಡ್ ಮುಕ್ತ ಶುದ್ಧ ನೀರು ಮಕ್ಕಳು ಕುಡಿಯಲು ಅನುಕೂಲ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿ ಕಿರಣ್ ಶುದ್ಧ ಕುಡಿಯುವ ನೀರಿನ ಘಟಕ ವಿತರಣೆ ಮಾಡಿ ಮಾತನಾಡಿ ತಾಲೂಕಿನ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಹೆಲ್ಪ್ ಸೊಸೈಟಿ ವತಿಯಿಂದ ಕೈಲಾದ ಸಹಾಯ ಸಹಕಾರ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಸೇವಕ ಅಮಿಲಿನೆನಿ ನರೇಶ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮೀ ಓಂಕಾರ ನಾಯಕ ಮುಖ್ಯ ಶಿಕ್ಷಕಿ ಭಾರತಿ ಪಾಳೇಗಾರ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಅಂಜನನಾಯಕ ಕೆ .ಗೋಪಾಲ್, ರಮೇಶ್, ಅಂಜನಾಯಕ ಮಹಾಲಿಂಗ ನಾಯಕ ಧನು ಹನುಮಂತರಾಯಪ್ಪ ಪದ್ಮ ಕಮಲಾಕ್ಷಿ ರಾಜಕುಮಾರ ಅಂಗನವಾಡಿ ಕಾರ್ಯಕರ್ತೆ ರಂಗಮ್ಮ ಅಡುಗೆ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ವರದಿ‌ ಪೃಥ್ವಿರಾಜು ಜಿ. ವಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!