ತುಮಕೂರು ಜಿಲ್ಲೆಯ ಕೊರಟಗೆರೆ ಕೊರಟಗೆರೆ ತಾಲೂಕಿನ ಹೋಬಳಿಯ ಚಿನ್ನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಚಿನ್ನಹಳ್ಳಿ ಮತ್ತು ಅಕ್ಕ ಪಕ್ಕದ ಗ್ರಾಮಗಳಲ್ಲಿ ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ಕುಡಿಯುವ ನೀರನ್ನು ಪೂರೈಸುವ ಗುರಿಯನ್ನು ಹೊಂದಿದ್ದು ಈ ಯೋಜನೆಯು “ಹರ್ ಘರ್ ಜಲ್” (ಪ್ರತಿ ಮನೆಗೆ ನೀರು) ಜಲೋತ್ಸವ ಎಂಬ ಘೋಷಣೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು ಗ್ರಾಮೀಣ ಭಾಗದ ಜನರ, ವಿಶೇಷವಾಗಿ ಮಹಿಳೆಯರ ಜೀವನದ ಗುಣಮಟ್ಟವನ್ನು ಸುಧಾರಿಸಲು ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಗ್ರಾಮೀಣ ಕುಟುಂಬಗಳಿಗೆ ದೈನಂದಿನ ಅವಶ್ಯಕತೆಗಾಗಿ ಪ್ರತಿದಿನ ನೀರು ಪೂರೈಸುವುದು ಯೋಜನೆಯ ಮುಖ್ಯ ಗುರಿ. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯಪಾಲಕ ಇಂಜಿನಿಯರ್ ಕುಮಾರಸ್ವಾಮಿಯವರು ಜಲ್ ಜೀವನ್ ಮಿಷನ್ ಕಾಮಗಾರಿಯು ಸಮರ್ಪಕವಾಗಿ ಪೂರ್ಣಗೊಂಡಿದ್ದು ಹರ್ ಘರ್ ಘೋಷಣೆ ಮಾಡುವುದರ ಮುಖಾಂತರ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ಕಾಂತರಾಜು, ರಂಜಿತ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಜಿ ವೈ, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ : ಪ್ರಸನ್ನ ಕುಮಾರ್ ಎಸ್., ಕೊರಟಗೆರೆ



















