ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನಿವಾಸಿ ಕನ್ನಡಿಗರ ಒಕ್ಕೂಟ ‘ನಾವಿಕ’ (NAVIKA) ವತಿಯಿಂದ ಫೆಬ್ರವರಿ 9 ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ

ಬಾಗಲಕೋಟೆ/ ಹುನಗುಂದ ಅನಿವಾಸಿ ಕನ್ನಡಿಗರ ಒಕ್ಕೂಟನಾವಿಕ’ (NAVika) ಸಂಸ್ಥೆಯ 2026-27ನೇ ಸಾಲಿನ ಕಾರ್ಯ ಯೋಜನೆಗಳ ಘೋಷಣೆ ಕುರಿತ ಪತ್ರಿಕಾಗೋಷ್ಠಿ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ಜರುಗಲಿದೆ.
ಅಮೆರಿಕಾದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ‘ನಾವಿಕ’ (ನಾವೂ ವಿಶ್ವ ಕನ್ನಡಿಗರು) ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವ ಕಾಯಕದಲ್ಲಿ ತೊಡಗಿದೆ.
ವಿಶ್ವದಾದ್ಯಂತ ಇರುವ ಕನ್ನಡಿಗರನ್ನು ಒಗ್ಗೂಡಿಸಿ, ಸಾಹಿತ್ಯಿಕ ಚಟುವಟಿಕೆಗಳ ಜೊತೆಗೆ ಯುವಜನತೆಯ ಅಭಿವೃದ್ಧಿ ಹಾಗೂ ಸಾಮಾಜಿಕ ಸಬಲೀಕರಣಕ್ಕಾಗಿ ನಾವಿಕ ಸಂಸ್ಥೆಯು ಹತ್ತಾರು ಜನೋಪಕಾರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಇದೀಗ ಸಂಸ್ಥೆಯು 2026 ಮತ್ತು 2027ನೇ ಸಾಲಿನ ತನ್ನ ನೂತನ ಧ್ಯೇಯೋದ್ದೇಶಗಳು ಮತ್ತು ಕಾರ್ಯತಂತ್ರಗಳನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಪ್ರಕಟಿಸಲು ನಿರ್ಧರಿಸಿದೆ.
ಅಧ್ಯಕ್ಷತೆಯನ್ನು ನಾವಿಕ ಒಕ್ಕೂಟದ ಅಧ್ಯಕ್ಷೈಡಾ. ಅನ್ನಪೂರ್ಣ ಭಟ್, ಮುಖ್ಯ ಅತಿಥಿಗಳಗಳಾಗಿ ಮಾಜಿ ಸಚಿವ ಎಸ್. ಆರ್. ಪಾಟೀಲ್ ಭಾಗವಹಿಸಲಿದ್ದಾರೆ ಈ ಪತ್ರಿಕಾಗೋಷ್ಠಿಗೆ ಕನ್ನಡ ಚಿತ್ರರಂಗದ ಖ್ಯಾತ ಶ್ರೀಮತಿ ಪ್ರೇಮಾ ಸೇರಿದಂತೆ ಖ್ಯಾತ ಗಣ್ಯರು ಉಪಸ್ಥಿತರಿರುವರು.

ತಮ್ಮ ಪತ್ರಿಕೆ/ವಾಹಿನಿಯ ವರದಿಗಾರರು ಹಾಗೂ ಛಾಯಾಗ್ರಾಹಕರು ಈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿರಬೇಕೆಂದು ಇರಬೇಕೆಂದು USA ನಾವಿಕ ಅಧ್ಯಕ್ಷೆ ಡಾ. ಅನ್ನಪೂರ್ಣ ಭಟ್ ಹಾಗೂ ನಾವಿಕ ಯುಎಸ್ಎ ಕರ್ನಾಟಕ ಸರ್ಕಾರಿ ಸಂಪರ್ಕ ಸಮಿತಿ ಅಧ್ಯಕ್ಷ ಗೌರಿಶಂಕರ ರಂಗನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!