ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಜಾಲೀಸ್ ಟಿಪ್ಪು ಸುಲ್ತಾನ್ ಸಂಘಟನೆಯ ಕಂಪ್ಲಿ ತಾಲೂಕು ಅಧ್ಯಕ್ಷರಾಗಿ ಎಂ. ಮೆಹಬೂಬ್

ಬಳ್ಳಾರಿ / ಕಂಪ್ಲಿ : ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಮಜಾಲೀಸ್ ಟಿಪ್ಪು ಸುಲ್ತಾನ್ ಸಂಘಟನೆಯ ತಾಲ್ಲೂಕು ಘಟಕವನ್ನು ಪ್ರಾರಂಭಿಸಲಾಯಿತು. ಕಂಪ್ಲಿ ತಾಲೂಕು ಮಜಾಲೀಸ್ ಟಿಪ್ಪು ಸುಲ್ತಾನ್ ಸಂಘಟನೆಯ ಕಂಪ್ಲಿ ತಾಲೂಕು ಅಧ್ಯಕ್ಷರಾಗಿ ಎಂ. ಮೆಹಬೂಬ್ ಅವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಿ ವಿಜಯನಗರ ಜಿಲ್ಲಾ ಘಟಕ ಅಧ್ಯಕ್ಷರ ಇರ್ಫಾನ್ ರವರು ಘೋಷಣೆ ಮಾಡಿ ಆದೇಶ ಪತ್ರ ನೀಡಿ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಸೋಮಲಾಪುರ ಗ್ರಾಮ ಘಟಕಗಳ ನೇಮಕ ಹಾಗೂ ಸಂಘ ರಚನೆ ಮಾಡಿ ಆದೇಶ ಪತ್ರ ನೀಡಲಾಯಿತು.

ವಿಜಯನಗರ ಜಿಲ್ಲಾ ಘಟಕ ಅಧ್ಯಕ್ಷರ ಇರ್ಫಾನ್ ಕಟಿಗಿ ಮಾತನಾಡಿ ಸಮಾಜಮುಖಿ ಕಾರ್ಯಗಳಲ್ಲಿ ನಮ್ಮ ಸಂಘಟನೆ ತೊಡಗಿಸಿಕೊಂಡಿದೆ.
ಶಿಕ್ಷಣ ಮತ್ತು ಸಾಕ್ಷರತೆ ವಿದ್ಯಾಭ್ಯಾಸಕ್ಕೆ ನೆರವು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಮತ್ತು ವೈದ್ಯಕೀಯ ಸೇವೆ,
ನಿಯಮಿತವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಸಬಲೀಕರಣಕ್ಕೆ ಒತ್ತು ನೀಡುವದು, ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
ಸಮುದಾಯ ಸೇವೆ ಮತ್ತು ಅಭಿವೃದ್ಧಿ
ದೀನದಲಿತರ ಸೇವಾ ಕಾರ್ಯಗಳನ್ನು ನಿರ್ವಹಿಸಲಾಗುವುದು ಎಂದರು.
ನೂತನ ಕಂಪ್ಲಿ ತಾಲೂಕು ಅಧ್ಯಕ್ಷ ಎಂ. ಮೆಹಬೂಬ್ ಮಾತನಾಡಿ ಸಮಾಜಗಾಗಿ ಏಳಿಗೆ ಮತ್ತು ಸಮಾಜಸೇವೆ, ಅನ್ಯಾಯ ವಿರುದ್ದ ಹೋರಾಟ ಹಾಗೂ ಸಂಘಟನೆ ಬಲವನ್ನು ಮಾಡಿ ಸಮಾಜಕ್ಕೆ ಒಳ್ಳೆ ಕಾರ್ಯಗಳನ್ನು ನಿರ್ವಹಿಸುತ್ತೇನೆ ಎಂದರು.

ಸೋಮಲಾಪುರ ಗ್ರಾಮ ಘಟಕದ ಅಧ್ಯಕ್ಷರಾಗಿ ಮೆಹಬೂಬ್, ಉಪಾಧ್ಯಕ್ಷರಾಗಿ ಇಮಾಮ್ ಹುಸೈನ್,
ಪ್ರದಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಫೀಕ್,
ಕಾರ್ಯದರ್ಶಿಯಾಗಿ ರಾಜಾಭಕ್ಷಿ
ಖಜಾಂಚಿ ಎಂ. ಮೌಲಾಸಾಬ್,
ಇತರರನ್ನು ಸದ್ಯಸರಾಗಿ ನೇಮಿಸಲಾಯಿತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!