ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೇಟೆ ಶಹಾಪುರ ಶಾಲೆಯಲ್ಲಿ ಇಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಒಂದು ದಿನದ ಸಮಾವೇಶ

ಯಾದಗಿರಿ ಶಹಾಪುರ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಪೇಟ ಶಹಾಪುರ ಶಾಲೆಯಲ್ಲಿ ಇಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಶಹಪುರ ತಾಲೂಕಾ ಮಟ್ಟದ ಸ್ಕೌಟರ್ಸ್ ಗೈಡ್ ರ ಒಂದು ದಿನದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು ಹಾಗೂ ಸ್ಕೌಟ್ ಕ್ಯಾಲೆಂಡರ್ ಬಿಡುಗಡೆ ಮತ್ತು ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಶಾಲಾ ಮಕ್ಕಳಿಗೆ ಸ್ಕಾರ್ಪ್ ಪ್ರಮಾಣ ಪತ್ರ ವಿತರಣೆ ಹಾಗೂ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಂಬೂರಿಯಲ್ಲಿ ಭಾಗವಹಿಸಿದ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಮಾಡಲಾಯಿತು. ತಾಲೂಕಾ ಅಧ್ಯಕ್ಷರಾದ ಶಿವರಾಜ್ ದೇಶಮುಖ, ಉಪಾಧ್ಯಕ್ಷರಾದ ಗುರುಬಸಯ್ಯ ಗದ್ದುಗೆ, ಮರೆಪ್ಪ ಚೆಂಡು, ಶ್ರೀಮತಿ ಸುರಯ್ಯ ಬೇಗಮ್, ಜಿಲ್ಲಾ ಹಣಕಾಸು ಸಮಿತಿ ಸದಸ್ಯರಾದ ದಿನೇಶ್ ಜೈನ, ತಾಲೂಕ ದೈಹಿಕ ಶಿಕ್ಷಣ ಪರಿವಿಕ್ಷಕರಾದ ಶರಣಪ್ಪ ಪಾಟೀಲ್, ಬಸವರಾಜ ಗೋಗಿ ಕಾರ್ಯದರ್ಶಿ ಭಾಗವಹಿಸಿದ್ದರು.
ಶ್ರೀಮತಿ ಚಂದ್ರಕಲಾ ಗೂಗಲ್ ಅವರು ಕಾರ್ಯಕ್ರಮ ನಿರೂಪಿಸಿದರು. ಮಲ್ಲಯ್ಯ ಬೆಳಗುಂದಿ ಕಾರ್ಯಕ್ರಮಕ್ಕೆ ಬಂದ ಗಣ್ಯರಿಗೆ ಸ್ವಾಗತಿಸಿದರು. ವಿಜಯ ಅವರು ಸರ್ವರಿಗೂ ವಂದಿಸಿದರು.
ಅಂತರಾಷ್ಟ್ರೀಯ ಸಾಂಸ್ಕೃತಿಕ ಜಂಬೂರಿ ಕುರಿತು ಅನಿಸಿಕೆಯನ್ನು ಶ್ರೀಮತಿ ಸೌಮ್ಯ ಕುಲಕರ್ಣಿ, ವಿಜಯ ಹಾಗೂ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ